ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೌಡಿ ಕೊಂದಿದ್ದ ಆರೋಪಿ ಕಾಲಿಗೆ ಗುಂಡೇಟು

Last Updated 4 ಮೇ 2020, 8:43 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರೌಡಿ ಬಿಜ್ಜು ಎಂಬಾತನನ್ನು ಕೊಂದಿದ್ದ ಆರೋಪಿ ಸಂಜಯ್ ಅಲಿಯಾಸ್ ಆ್ಯಂಡ್ರೂಸ್‌ನನ್ನು ಕಾಲಿಗೆ ಗುಂಡು ಹಾರಿಸಿ ಸೋಮವಾರ ಸೆರೆಹಿಡಿಯಲಾಗಿದೆ.

ಬೆಳಿಗ್ಗೆ ತನ್ನನ್ನು ಬಂಧಿಸಲು ಮುಂದಾಗಿದ್ದ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ಮಾಡಲು ಮುಂದಾಗಿದ್ದ.

ಬೆಳಗ್ಗೆ 6 ಗಂಟೆ ಸುಮಾರಿಗೆ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯ ಲಿಟ್ಕರ್ ಕಾಲೋನಿಯಲ್ಲಿ ಆರೋಪಿ ಇದ್ದ. ಬಂಧಿಸಲು ತೆರಳಿದ್ದ ವೇಳೆ‌ ಪೊಲೀಸರ ಮೇಲೆ ಖಾರದ ಪುಡಿ ಎರಚಿ ಹಲ್ಲೆಗೆ ಯತ್ನಿಸಿದ್ದ. ಗಾಳಿಯಲ್ಲಿ‌ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದ ಇನ್‌ಸ್ಪೆಕ್ಟರ್ ಅಜಯ್ ಸಾರಥಿ. ಶರಣಾಗದೇ ಹಲ್ಲೆಗೆ ಮುಂದಾದಾಗ ಆರೋಪಿಯ ಎಡಗಾಲಿಗೆ ಗುಂಡು ಹೊಡೆದರು.

ರೌಡಿ ಶೀಟರ್ ಬಿಜ್ಜು ಕೊಲೆ ಪ್ರಕರಣ‌ದ ಆರೋಪಿಯಾಗಿದ್ದ ಸಂಜಯ್. ಮೇ 2ರಂದು ಮಾರಕಾಸ್ತ್ರದಿಂದ ರೌಡಿಶೀಟರ್ ಬಿಜ್ಜುನನ್ನು (30) ಕೊಲೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT