<p><strong>ಬೆಂಗಳೂರು:</strong> ಮದ್ಯ ಕೊಡಲಿಲ್ಲವೆಂದು ಸ್ನೇಹಿತನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ರೌಡಿಯ ಕಾಲಿಗೆ ಗುಂಡು ಹೊಡೆದು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>ಮುನಿಕೃಷ್ಣ ಅಲಿಯಾಸ್ ಕಪ್ಪೆ ( 27) ಗುಂಡೇಟು ತಿಂದ ಆರೋಪಿ. ಈತನ ವಿರುದ್ಧ ಅಮೃತಹಳ್ಳಿ, ಕೊಡಿಗೇಹಳ್ಳಿ, ಜ್ಞಾನಭಾರತಿ, ಚಿಕ್ಕಜಾಲ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ಹಲ್ಲೆ ಸೇರಿ ಎಂಟಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.</p>.<p>ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಿಟ್ಟಗಾನಹಳ್ಳಿ ಕಲ್ಲು ಕ್ವಾರೆಯ ಬಳಿ ಇರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.</p>.<p>ತನ್ನನ್ನು ಬಂಧಿಸಲು ಮುಂದಾದ ಪೊಲೀಸರ ಮೇಲೆ ಡ್ರ್ಯಾಗರ್ನಿಂದ ಹಲ್ಲೆ ಮಾಡಿ ಪರಾರಿಯಾಗಲು ಮುನಿಕೃಷ್ಣ ಯತ್ನಿಸಿದ್ದಾನೆ. ಈ ವೇಳೆ ಹೆಡ್ ಕಾನ್ಸ್ಟೆಬಲ್ ನಂದೀಶ್ ಎಂಬುವರಿಗೆ ಗಾಯವಾಗಿದೆ. ತಕ್ಷಣ ಅಮೃತಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ಅರುಣ್ಕುಮಾರ್, ಆರೋಪಿಯ ಬಲ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.</p>.<p>ಮದ್ಯ ಕೊಡಲಿಲ್ಲವೆಂದು ಸ್ನೇಹಿತನಿಗೆ ಚೂರಿಯಿಂದ ಇರಿದು ಮುನಿಕೃಷ್ಣ ಪರಾರಿಯಾಗಿದ್ದ. ಈ ಸಂಬಂಧ, ಆತನ ವಿರುದ್ಧ ಅಮೃತಹಳ್ಳಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲು ಪೊಲೀಸರು ತೆರಳಿದ್ದರು.</p>.<p>ಗಾಯಗೊಂಡಿರುವ ಮುನಿಕೃಷ್ಣ ಮತ್ತು ಹೆಡ್ ಕಾನ್ಸ್ಟೆಬಲ್ ನಂದೀಶ್ ಅವರನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮದ್ಯ ಕೊಡಲಿಲ್ಲವೆಂದು ಸ್ನೇಹಿತನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ರೌಡಿಯ ಕಾಲಿಗೆ ಗುಂಡು ಹೊಡೆದು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>ಮುನಿಕೃಷ್ಣ ಅಲಿಯಾಸ್ ಕಪ್ಪೆ ( 27) ಗುಂಡೇಟು ತಿಂದ ಆರೋಪಿ. ಈತನ ವಿರುದ್ಧ ಅಮೃತಹಳ್ಳಿ, ಕೊಡಿಗೇಹಳ್ಳಿ, ಜ್ಞಾನಭಾರತಿ, ಚಿಕ್ಕಜಾಲ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ಹಲ್ಲೆ ಸೇರಿ ಎಂಟಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.</p>.<p>ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಿಟ್ಟಗಾನಹಳ್ಳಿ ಕಲ್ಲು ಕ್ವಾರೆಯ ಬಳಿ ಇರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.</p>.<p>ತನ್ನನ್ನು ಬಂಧಿಸಲು ಮುಂದಾದ ಪೊಲೀಸರ ಮೇಲೆ ಡ್ರ್ಯಾಗರ್ನಿಂದ ಹಲ್ಲೆ ಮಾಡಿ ಪರಾರಿಯಾಗಲು ಮುನಿಕೃಷ್ಣ ಯತ್ನಿಸಿದ್ದಾನೆ. ಈ ವೇಳೆ ಹೆಡ್ ಕಾನ್ಸ್ಟೆಬಲ್ ನಂದೀಶ್ ಎಂಬುವರಿಗೆ ಗಾಯವಾಗಿದೆ. ತಕ್ಷಣ ಅಮೃತಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ಅರುಣ್ಕುಮಾರ್, ಆರೋಪಿಯ ಬಲ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.</p>.<p>ಮದ್ಯ ಕೊಡಲಿಲ್ಲವೆಂದು ಸ್ನೇಹಿತನಿಗೆ ಚೂರಿಯಿಂದ ಇರಿದು ಮುನಿಕೃಷ್ಣ ಪರಾರಿಯಾಗಿದ್ದ. ಈ ಸಂಬಂಧ, ಆತನ ವಿರುದ್ಧ ಅಮೃತಹಳ್ಳಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲು ಪೊಲೀಸರು ತೆರಳಿದ್ದರು.</p>.<p>ಗಾಯಗೊಂಡಿರುವ ಮುನಿಕೃಷ್ಣ ಮತ್ತು ಹೆಡ್ ಕಾನ್ಸ್ಟೆಬಲ್ ನಂದೀಶ್ ಅವರನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>