<p><strong>ಬೆಂಗಳೂರು</strong>: ಚಿಕ್ಕಪೇಟೆ ವಿಭಾಗದ ಗಾಂಧಿಬಜಾರ್ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.</p>.<p>ಗಾಂಧಿಬಜಾರ್ನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗಲು ಸುಮಾರು 120 ಮಳಿಗೆಗಳಿಗೆ ಸ್ಥಳ ಗುರುತಿಸಿ, ಆ ಸ್ಥಳದಲ್ಲಿಯೇ ವ್ಯಾಪಾರ ಮಾಡಲು ಸೂಚನೆ ನೀಡಲಾಗಿತ್ತು. ಆದರೆ ನಿಗದಿಪಡಿಸಿರುವ ಸ್ಥಳ ಬಿಟ್ಟು ಬೇರೆ ಜಾಗದಲ್ಲಿ ವ್ಯಾಪಾರ ಮಾಡುತ್ತಿದ್ದು, ಇದರಿಂದ ಪಾದಚಾರಿಗಳಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ ಎಂದು ಚಿಕ್ಕಪೇಟೆ ಕಾರ್ಯಪಾಲಕ ಎಂಜಿನಿಯರ್ ಪ್ರದೀಪ್ ಕುಮಾರ್ ಹೇಳಿದರು.</p>.<p>ಒತ್ತುವರಿ ತೆರವುಗೊಳಿಸಲು ಸಾಕಷ್ಟು ಬಾರಿ ತಿಳಿಸಿದ್ದರೂ ತೆರವುಗೊಳಿಸಿರಲಿಲ್ಲ. ಮಂಗಳವಾರ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವುಗೊಳಿಸಲಾಯಿತು. ಎರಡು ಜೆಸಿಬಿ, ಏಳು ಟ್ರ್ಯಾಕ್ಟರ್, ಮೂರು ಲಾರಿ ಹಾಗೂ 40 ಸಿಬ್ಬಂದಿ ಕಾರ್ಯನಿರ್ವಹಿಸಿದ್ದು, ಐದು ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಬೀದಿ ಬದಿ ವ್ಯಾಪಾರಿಗಳು ಅವರಿಗೆ ನಿಗದಿಪಡಿಸಿರುವ ಜಾಗದಲ್ಲಿಯೇ ವ್ಯಾಪಾರ ಮಾಡಬೇಕು. ಅದನ್ನು ಹೊರತುಪಡಿಸಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿಕ್ಕಪೇಟೆ ವಿಭಾಗದ ಗಾಂಧಿಬಜಾರ್ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.</p>.<p>ಗಾಂಧಿಬಜಾರ್ನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗಲು ಸುಮಾರು 120 ಮಳಿಗೆಗಳಿಗೆ ಸ್ಥಳ ಗುರುತಿಸಿ, ಆ ಸ್ಥಳದಲ್ಲಿಯೇ ವ್ಯಾಪಾರ ಮಾಡಲು ಸೂಚನೆ ನೀಡಲಾಗಿತ್ತು. ಆದರೆ ನಿಗದಿಪಡಿಸಿರುವ ಸ್ಥಳ ಬಿಟ್ಟು ಬೇರೆ ಜಾಗದಲ್ಲಿ ವ್ಯಾಪಾರ ಮಾಡುತ್ತಿದ್ದು, ಇದರಿಂದ ಪಾದಚಾರಿಗಳಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ ಎಂದು ಚಿಕ್ಕಪೇಟೆ ಕಾರ್ಯಪಾಲಕ ಎಂಜಿನಿಯರ್ ಪ್ರದೀಪ್ ಕುಮಾರ್ ಹೇಳಿದರು.</p>.<p>ಒತ್ತುವರಿ ತೆರವುಗೊಳಿಸಲು ಸಾಕಷ್ಟು ಬಾರಿ ತಿಳಿಸಿದ್ದರೂ ತೆರವುಗೊಳಿಸಿರಲಿಲ್ಲ. ಮಂಗಳವಾರ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವುಗೊಳಿಸಲಾಯಿತು. ಎರಡು ಜೆಸಿಬಿ, ಏಳು ಟ್ರ್ಯಾಕ್ಟರ್, ಮೂರು ಲಾರಿ ಹಾಗೂ 40 ಸಿಬ್ಬಂದಿ ಕಾರ್ಯನಿರ್ವಹಿಸಿದ್ದು, ಐದು ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಬೀದಿ ಬದಿ ವ್ಯಾಪಾರಿಗಳು ಅವರಿಗೆ ನಿಗದಿಪಡಿಸಿರುವ ಜಾಗದಲ್ಲಿಯೇ ವ್ಯಾಪಾರ ಮಾಡಬೇಕು. ಅದನ್ನು ಹೊರತುಪಡಿಸಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>