<p><strong>ಬೆಂಗಳೂರು: </strong>ಹೊಸಕೆರೆಹಳ್ಳಿ ವಾರ್ಡ್ನ ಗುರುದತ್ತ ಲೇಔಟ್ನಲ್ಲಿನ ದತ್ತಾತ್ರೇಯ ದೇವಸ್ಥಾನದ ಬಳಿ ಪಾದಚಾರಿ ಮಾರ್ಗವನ್ನೂ ದಾಟಿ ರಸ್ತೆಯ ಮೇಲೆ ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ವಾಹನ ಮತ್ತು ಜನ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.</p>.<p>ದತ್ತಾತ್ರೇಯ ದೇವಸ್ಥಾನದ ಗೋಪುರಕ್ಕೆ ಹೊಂದಿಕೊಂಡಂತೆ ಮೂರು ಮಳಿಗೆ ನಿರ್ಮಿಸಲಾಗಿದೆ. ಇನ್ನೊಂದು ಬದಿಯಲ್ಲಿ ನೀರು ಶುದ್ಧೀಕರಣ ಘಟಕವನ್ನು ತೆರೆಯಲಾಗಿದೆ. ಅ ಮಳಿಗೆಯೊಂದರಲ್ಲಿ ದ್ವಿಚಕ್ರವಾಹನ ರಿಪೇರಿ ಮಾಡುವ ಗ್ಯಾರೇಜ್ ತೆರೆಯಲಾಗಿದೆ. ಗ್ಯಾರೇಜ್ ತೆರೆದ ಸಂದರ್ಭದಲ್ಲಿ ಒಳಗಿದ್ದ ದ್ವಿಚಕ್ರ ವಾಹನಗಳನ್ನು ಹೊರಕ್ಕೆ ಅಂದರೆ ರಸ್ತೆಗೇ ನಿಲ್ಲಿಸಲಾಗುತ್ತದೆ. ಅಲ್ಲೇ ರಿಪೇರಿ ಕೆಲಸವೂ ನಡೆಯುತ್ತದೆ ಎಂದು ಸ್ಥಳೀಯರು ಆರೋಪಿಸಿದರು.</p>.<p>‘ನಿರ್ಮಾಣವಾಗಿರುವ ಮಳಿಗೆಗಳ ಹಿಂಭಾಗದಲ್ಲಿ ತಂತಿಬೇಲಿ ಇದೆ. ಬೇಲಿ ಪಕ್ಕದಲ್ಲಿ ಮಳೆ ನೀರು ಹರಿದು ಹೋಗಲು ಬಾಕ್ಸ್ ಚರಂಡಿ ನಿರ್ಮಿಸಲಾಗಿದೆ. ಮಳಿಗೆ ತನಕ ಮಾತ್ರ ಚರಂಡಿ ಇದ್ದು, ನಂತರ ಇಲ್ಲ. ದೇವಸ್ಥಾನ ಆಡಳಿತ ಮಂಡಳಿಯವರೇ ಈ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆಗೆ ನೀಡಿದ್ದಾರೆ. ತೆರವುಗೊಳಿಸಲು ಬಿಬಿಎಂಪಿ ಕ್ರಮ ಕೈಗೊಂಡಿಲ್ಲ. ಮೊದಲೇ ಕಿರಿದಾದ ರಸ್ತೆಯಲ್ಲಿ ಎದುರಿನಿಂದ ವಾಹನ ಬಂದರೆ ಮುಂದೆ ಸಾಗುವುದು ಕಷ್ಟವಾಗುತ್ತಿದೆ’ ಎಂದು ಹೇಳಿದರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚೇತನ್, ‘ದೇವಸ್ಥಾನದವರೇ ಮಳಿಗೆ ನಿರ್ಮಿಸಿರುವುದು ಗಮನಕ್ಕೆ ಬಂದಿದೆ. ತೆರವುಗೊಳಿಸುವಂತೆ ನೋಟಿಸ್ ನೀಡಲಾಗಿದೆ. ಅವರಾಗಿಯೇ ತೆರವುಗೊಳಿಸಿದರೆ ಗೌರವ ಉಳಿಯುತ್ತದೆ. ಇಲ್ಲದಿದ್ದರೆ ಜೆಸಿಬಿ ಕರೆದೊಯ್ದು ತೆರವುಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>‘ಮಳಿಗೆ ನಿರ್ಮಾಣ ಆಗಿರುವುದು ದೇವಸ್ಥಾನದ ಜಾಗದಲ್ಲೇ ಹೊರತು, ರಸ್ತೆ ಅಥವಾ ಪುಟ್ಪಾತ್ ಜಾಗದಲ್ಲಿ ಅಲ್ಲ. ಚರಂಡಿ ಮತ್ತು ರಸ್ತೆಗೆ ದೇವಸ್ಥಾನದ ಜಾಗವನ್ನೇ ಬಿಟ್ಟುಕೊಟ್ಟಿದ್ದೇವೆ. ಮಳಿಗೆ ತೆರವುಗೊಳಿಸಲು ಈವರೆಗೆ ಯಾರೂ ನೋಟಿಸ್ ನೀಡಿಲ್ಲ’ ಎಂದು ದೇವಸ್ಥಾನ ಜೀರ್ಣೋದ್ಧಾರ ಸಮಿತಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹೊಸಕೆರೆಹಳ್ಳಿ ವಾರ್ಡ್ನ ಗುರುದತ್ತ ಲೇಔಟ್ನಲ್ಲಿನ ದತ್ತಾತ್ರೇಯ ದೇವಸ್ಥಾನದ ಬಳಿ ಪಾದಚಾರಿ ಮಾರ್ಗವನ್ನೂ ದಾಟಿ ರಸ್ತೆಯ ಮೇಲೆ ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ವಾಹನ ಮತ್ತು ಜನ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.</p>.<p>ದತ್ತಾತ್ರೇಯ ದೇವಸ್ಥಾನದ ಗೋಪುರಕ್ಕೆ ಹೊಂದಿಕೊಂಡಂತೆ ಮೂರು ಮಳಿಗೆ ನಿರ್ಮಿಸಲಾಗಿದೆ. ಇನ್ನೊಂದು ಬದಿಯಲ್ಲಿ ನೀರು ಶುದ್ಧೀಕರಣ ಘಟಕವನ್ನು ತೆರೆಯಲಾಗಿದೆ. ಅ ಮಳಿಗೆಯೊಂದರಲ್ಲಿ ದ್ವಿಚಕ್ರವಾಹನ ರಿಪೇರಿ ಮಾಡುವ ಗ್ಯಾರೇಜ್ ತೆರೆಯಲಾಗಿದೆ. ಗ್ಯಾರೇಜ್ ತೆರೆದ ಸಂದರ್ಭದಲ್ಲಿ ಒಳಗಿದ್ದ ದ್ವಿಚಕ್ರ ವಾಹನಗಳನ್ನು ಹೊರಕ್ಕೆ ಅಂದರೆ ರಸ್ತೆಗೇ ನಿಲ್ಲಿಸಲಾಗುತ್ತದೆ. ಅಲ್ಲೇ ರಿಪೇರಿ ಕೆಲಸವೂ ನಡೆಯುತ್ತದೆ ಎಂದು ಸ್ಥಳೀಯರು ಆರೋಪಿಸಿದರು.</p>.<p>‘ನಿರ್ಮಾಣವಾಗಿರುವ ಮಳಿಗೆಗಳ ಹಿಂಭಾಗದಲ್ಲಿ ತಂತಿಬೇಲಿ ಇದೆ. ಬೇಲಿ ಪಕ್ಕದಲ್ಲಿ ಮಳೆ ನೀರು ಹರಿದು ಹೋಗಲು ಬಾಕ್ಸ್ ಚರಂಡಿ ನಿರ್ಮಿಸಲಾಗಿದೆ. ಮಳಿಗೆ ತನಕ ಮಾತ್ರ ಚರಂಡಿ ಇದ್ದು, ನಂತರ ಇಲ್ಲ. ದೇವಸ್ಥಾನ ಆಡಳಿತ ಮಂಡಳಿಯವರೇ ಈ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆಗೆ ನೀಡಿದ್ದಾರೆ. ತೆರವುಗೊಳಿಸಲು ಬಿಬಿಎಂಪಿ ಕ್ರಮ ಕೈಗೊಂಡಿಲ್ಲ. ಮೊದಲೇ ಕಿರಿದಾದ ರಸ್ತೆಯಲ್ಲಿ ಎದುರಿನಿಂದ ವಾಹನ ಬಂದರೆ ಮುಂದೆ ಸಾಗುವುದು ಕಷ್ಟವಾಗುತ್ತಿದೆ’ ಎಂದು ಹೇಳಿದರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚೇತನ್, ‘ದೇವಸ್ಥಾನದವರೇ ಮಳಿಗೆ ನಿರ್ಮಿಸಿರುವುದು ಗಮನಕ್ಕೆ ಬಂದಿದೆ. ತೆರವುಗೊಳಿಸುವಂತೆ ನೋಟಿಸ್ ನೀಡಲಾಗಿದೆ. ಅವರಾಗಿಯೇ ತೆರವುಗೊಳಿಸಿದರೆ ಗೌರವ ಉಳಿಯುತ್ತದೆ. ಇಲ್ಲದಿದ್ದರೆ ಜೆಸಿಬಿ ಕರೆದೊಯ್ದು ತೆರವುಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>‘ಮಳಿಗೆ ನಿರ್ಮಾಣ ಆಗಿರುವುದು ದೇವಸ್ಥಾನದ ಜಾಗದಲ್ಲೇ ಹೊರತು, ರಸ್ತೆ ಅಥವಾ ಪುಟ್ಪಾತ್ ಜಾಗದಲ್ಲಿ ಅಲ್ಲ. ಚರಂಡಿ ಮತ್ತು ರಸ್ತೆಗೆ ದೇವಸ್ಥಾನದ ಜಾಗವನ್ನೇ ಬಿಟ್ಟುಕೊಟ್ಟಿದ್ದೇವೆ. ಮಳಿಗೆ ತೆರವುಗೊಳಿಸಲು ಈವರೆಗೆ ಯಾರೂ ನೋಟಿಸ್ ನೀಡಿಲ್ಲ’ ಎಂದು ದೇವಸ್ಥಾನ ಜೀರ್ಣೋದ್ಧಾರ ಸಮಿತಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>