‘ನಿರ್ಮಾಣವಾಗಿರುವ ಮಳಿಗೆಗಳ ಹಿಂಭಾಗದಲ್ಲಿ ತಂತಿಬೇಲಿ ಇದೆ. ಬೇಲಿ ಪಕ್ಕದಲ್ಲಿ ಮಳೆ ನೀರು ಹರಿದು ಹೋಗಲು ಬಾಕ್ಸ್ ಚರಂಡಿ ನಿರ್ಮಿಸಲಾಗಿದೆ. ಮಳಿಗೆ ತನಕ ಮಾತ್ರ ಚರಂಡಿ ಇದ್ದು, ನಂತರ ಇಲ್ಲ. ದೇವಸ್ಥಾನ ಆಡಳಿತ ಮಂಡಳಿಯವರೇ ಈ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆಗೆ ನೀಡಿದ್ದಾರೆ. ತೆರವುಗೊಳಿಸಲು ಬಿಬಿಎಂಪಿ ಕ್ರಮ ಕೈಗೊಂಡಿಲ್ಲ. ಮೊದಲೇ ಕಿರಿದಾದ ರಸ್ತೆಯಲ್ಲಿ ಎದುರಿನಿಂದ ವಾಹನ ಬಂದರೆ ಮುಂದೆ ಸಾಗುವುದು ಕಷ್ಟವಾಗುತ್ತಿದೆ’ ಎಂದು ಹೇಳಿದರು.