<p><strong>ಕೆ.ಆರ್.ಪುರ:</strong> ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಿ.ನಾರಾಯಣಪುರದ ಗೋವಿಂದಪ್ಪ ಕಾಂಪ್ಲೆಕ್ಸ್ ಬಳಿಯ ಯಮಹಾ ಬೈಕ್ ಶೋರೂಂನಲ್ಲಿ ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿದ್ದು, ಶೋರೂಂ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.</p>.<p>ನಾಗರಭಾವಿ ನಿವಾಸಿ ಪ್ರಶಾಂತ್ ಎಂಬವರಿಗೆ ಸೇರಿದ ಶೋರೂಂನಲ್ಲಿ ಬುಧವಾರ ರಾತ್ರಿ 8.40ರ ಸುಮಾರಿಗೆ ಘಟನೆ ಸಂಭವಿಸಿದೆ. ರಾತ್ರಿ 7 ಗಂಟೆಗೆ ಶೋರೂಂನ ಸಿಬ್ಬಂದಿ ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಅಗ್ನಿ ಅವಘಡದಿಂದ ಶೋರೂಂನಲ್ಲಿದ 52 ಬೈಕ್ಗಳು ಬೆಂಕಿಗೆ ಆಹುತಿ ಆಗಿವೆ. ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಮಾಲೀಕರು ಹೇಳಿದ್ಧಾರೆ.</p>.<p>ಈ ಅಗ್ನಿ ಅವಘಡದಿಂದ ಹಿಂಬದಿಯಿರುವ ಪುಷ್ಪಚಂದ್ ಚೋರ್ಡಿಯಾ ಮಾಲೀಕತ್ವದ ಖಿವ್ ರಾಜ್, ಟ್ರಯಂಪ್, ಮತ್ತು ರಾಯಲ್ ಎನ್ಫೀಲ್ಡ್ ಶೋರೂಂಗೂ ಬೆಂಕಿ ತಗುಲಿತ್ತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.</p>.<p>ಯಾವುದೇ ಪ್ರಾಣಪಾಯವಾಗಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಿ.ನಾರಾಯಣಪುರದ ಗೋವಿಂದಪ್ಪ ಕಾಂಪ್ಲೆಕ್ಸ್ ಬಳಿಯ ಯಮಹಾ ಬೈಕ್ ಶೋರೂಂನಲ್ಲಿ ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿದ್ದು, ಶೋರೂಂ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.</p>.<p>ನಾಗರಭಾವಿ ನಿವಾಸಿ ಪ್ರಶಾಂತ್ ಎಂಬವರಿಗೆ ಸೇರಿದ ಶೋರೂಂನಲ್ಲಿ ಬುಧವಾರ ರಾತ್ರಿ 8.40ರ ಸುಮಾರಿಗೆ ಘಟನೆ ಸಂಭವಿಸಿದೆ. ರಾತ್ರಿ 7 ಗಂಟೆಗೆ ಶೋರೂಂನ ಸಿಬ್ಬಂದಿ ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಅಗ್ನಿ ಅವಘಡದಿಂದ ಶೋರೂಂನಲ್ಲಿದ 52 ಬೈಕ್ಗಳು ಬೆಂಕಿಗೆ ಆಹುತಿ ಆಗಿವೆ. ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಮಾಲೀಕರು ಹೇಳಿದ್ಧಾರೆ.</p>.<p>ಈ ಅಗ್ನಿ ಅವಘಡದಿಂದ ಹಿಂಬದಿಯಿರುವ ಪುಷ್ಪಚಂದ್ ಚೋರ್ಡಿಯಾ ಮಾಲೀಕತ್ವದ ಖಿವ್ ರಾಜ್, ಟ್ರಯಂಪ್, ಮತ್ತು ರಾಯಲ್ ಎನ್ಫೀಲ್ಡ್ ಶೋರೂಂಗೂ ಬೆಂಕಿ ತಗುಲಿತ್ತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.</p>.<p>ಯಾವುದೇ ಪ್ರಾಣಪಾಯವಾಗಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>