<p><strong>ಪೀಣ್ಯ ದಾಸರಹಳ್ಳಿ:</strong> ದಾಸರಹಳ್ಳಿಯ ಭುವನೇಶ್ವರಿ ನಗರದ 5ನೇ ಮುಖ್ಯ ರಸ್ತೆಯ ಎಸ್ವಿ ಕೇಕ್ ಪ್ಯಾಲೇಸ್ ಬೇಕರಿ ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿಗಾಹುತಿಯಾಗಿದೆ.</p>.<p>ಆರು ವರ್ಷದಿಂದ ಕೃಷ್ಣ ಎಂಬುವರು ಬೇಕರಿ ನಡೆಸುತ್ತಿದ್ದರು. ಏಕಾಏಕಿ ಶಬ್ದ ಬಂದು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗಾಬರಿಯಿಂದ ಮಾಲೀಕ ಕೃಷ್ಣ ಅವರು ಹೊರಗೆ ಬಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ.</p>.<p>ಅಷ್ಟರಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಬೇಕರಿ ಆವರಿಸಿದೆ. ಸಾರ್ವಜನಿಕರು ಅಗ್ನಿಶಾಮಕ ದಳ, ಪೊಲೀಸ್ ಮತ್ತು ವಿದ್ಯುತ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಷ್ಟರಲ್ಲಿ ಬೇಕರಿಯ ತಿನಿಸು, ಪಾನೀಯಗಳು ಹಾಗೂ ಪೀಠೋಪಕರಣ ಸುಟ್ಟು ಹೋಗಿದ್ದವು. </p>.<p>ಅಕ್ಕ ಪಕ್ಕದ ಮನೆಗಳ ಕಿಟಕಿಯ ಗಾಜುಗಳು ಪುಡಿಯಾಗಿವೆ. ದಟ್ಟವಾದ ಹೊಗೆ ಆವರಿಸಿಕೊಂಡ ಕಾರಣ ಬೇಕರಿ ಮೇಲಿರುವ ಕಚೇರಿ ಹಾಗೂ ಮನೆಯ ಸದಸ್ಯರು ಹೊರಗೆ ಓಡಿ ಬಂದಿದ್ದಾರೆ.</p>.<p>‘ಅವಘಡದಲ್ಲಿ ಸುಮಾರು ₹15 ಲಕ್ಷ ಬೆಲೆ ಬಾಳುವ ಬೇಕರಿ ವಸ್ತುಗಳು ಭಸ್ಮವಾಗಿದೆ. ₹25 ಸಾವಿರ ನಗದು ಮತ್ತು ಮೊಬೈಲ್ ಸಹ ಸುಟ್ಟು ಹೋಗಿದೆ’ ಎಂದು ಮಾಲೀಕ ಕೃಷ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ದಾಸರಹಳ್ಳಿಯ ಭುವನೇಶ್ವರಿ ನಗರದ 5ನೇ ಮುಖ್ಯ ರಸ್ತೆಯ ಎಸ್ವಿ ಕೇಕ್ ಪ್ಯಾಲೇಸ್ ಬೇಕರಿ ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿಗಾಹುತಿಯಾಗಿದೆ.</p>.<p>ಆರು ವರ್ಷದಿಂದ ಕೃಷ್ಣ ಎಂಬುವರು ಬೇಕರಿ ನಡೆಸುತ್ತಿದ್ದರು. ಏಕಾಏಕಿ ಶಬ್ದ ಬಂದು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗಾಬರಿಯಿಂದ ಮಾಲೀಕ ಕೃಷ್ಣ ಅವರು ಹೊರಗೆ ಬಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ.</p>.<p>ಅಷ್ಟರಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಬೇಕರಿ ಆವರಿಸಿದೆ. ಸಾರ್ವಜನಿಕರು ಅಗ್ನಿಶಾಮಕ ದಳ, ಪೊಲೀಸ್ ಮತ್ತು ವಿದ್ಯುತ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಷ್ಟರಲ್ಲಿ ಬೇಕರಿಯ ತಿನಿಸು, ಪಾನೀಯಗಳು ಹಾಗೂ ಪೀಠೋಪಕರಣ ಸುಟ್ಟು ಹೋಗಿದ್ದವು. </p>.<p>ಅಕ್ಕ ಪಕ್ಕದ ಮನೆಗಳ ಕಿಟಕಿಯ ಗಾಜುಗಳು ಪುಡಿಯಾಗಿವೆ. ದಟ್ಟವಾದ ಹೊಗೆ ಆವರಿಸಿಕೊಂಡ ಕಾರಣ ಬೇಕರಿ ಮೇಲಿರುವ ಕಚೇರಿ ಹಾಗೂ ಮನೆಯ ಸದಸ್ಯರು ಹೊರಗೆ ಓಡಿ ಬಂದಿದ್ದಾರೆ.</p>.<p>‘ಅವಘಡದಲ್ಲಿ ಸುಮಾರು ₹15 ಲಕ್ಷ ಬೆಲೆ ಬಾಳುವ ಬೇಕರಿ ವಸ್ತುಗಳು ಭಸ್ಮವಾಗಿದೆ. ₹25 ಸಾವಿರ ನಗದು ಮತ್ತು ಮೊಬೈಲ್ ಸಹ ಸುಟ್ಟು ಹೋಗಿದೆ’ ಎಂದು ಮಾಲೀಕ ಕೃಷ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>