ಆಧ್ಯಾತ್ಮಿಕ ಚಿಂತಕ ಶ್ರೀ ಎಂ ಅವರು ಸ್ಥಾಪಿಸಿರುವ ಈ ಆಶ್ರಮಕ್ಕೆ ಭೇಟಿ ನೀಡಿದ ರಾಷ್ಟ್ರಪತಿ, ಇದೇ ಸಂದರ್ಭದಲ್ಲಿ ಭಾರತ ಯೋಗ ವಿದ್ಯಾಕೇಂದ್ರದ ಯೋಗಶಾಲೆಯನ್ನು ಉದ್ಘಾಟಿಸಿದರು. ಈ ಆಶ್ರಮದಲ್ಲಿ ಮೊದಲ ಬಾರಿಗೆ ಯೋಗ ಶಿಕ್ಷಕ ತರಬೇತಿ ಕೋರ್ಸ್ ಆರಂಭಿಸಲಾಗಿದ್ದು, ದೇಶದ ಬೇರೆ ಬೇರೆ ಭಾಗಗಳಿಂದ ಇಲ್ಲಿಗೆ ವ್ಯಾಸಂಗಕ್ಕೆ ಬಂದಿರುವ ವಿದ್ಯಾರ್ಥಿಗಳನ್ನು ಅವರು ಅಭಿನಂದಿಸಿದರು.