<p><strong>ಬೆಂಗಳೂರು:</strong> ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರು ಒಕ್ಕಲಿಗ ಮತ್ತು ಹೊಲೆಯ ಸಮುದಾಯಗಳನ್ನು ಹೀನಾಯವಾಗಿ ನಿಂದಿಸಿರುವುದನ್ನು ಖಂಡಿಸಿ ಅ.1ರಂದು ಶೂದ್ರ, ದಲಿತರ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.</p>.<p>ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಮಾವೇಶ ಕುರಿತು ಶುಕ್ರವಾರ ಸಭೆ ನಡೆಸಿದ ಸಮುದಾಯಗಳ ಮುಖಂಡರು, ಸಾಹಿತಿಗಳು, ಚಿಂತಕರು, ಹೋರಾಟಗಾರರು ಮತ್ತು ವಿದ್ಯಾರ್ಥಿ ಮುಖಂಡರು ಈ ತೀರ್ಮಾನ ಮಾಡಿದ್ದಾರೆ.</p>.<p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರು ಈ ರೀತಿ ಜಾತಿ ವಿರೋಧಿ ಹೇಳಿಕೆಗಳನ್ನು ಕೊಡುವುದು ಸಂವಿಧಾನ ವಿರೋಧಿ ಮತ್ತು ಕಾನೂನು ಬಾಹಿರವಾಗಿರುತ್ತದೆ. ಈ ಹೇಳಿಕೆಗಳಿಂದ ಒಕ್ಕಲಿಗ ಮತ್ತು ದಲಿತ ಸಮುದಾಯಗಳ ಭಾವನೆಗಳಿಗೆ ಘಾಸಿಯುಂಟಾಗಿದೆ. ಇದನ್ನು ಖಂಡಿಸಿ ಸಮಾವೇಶ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದ್ದಾರೆ. </p>.<p>ಸಭೆಯಲ್ಲಿ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ನಟ ಶ್ರೀನಗರ ಕಿಟ್ಟಿ, ಬಿ. ಗೋಪಾಲ್, ಬಸವರಾಜ್ ಕೌತಾಳ್, ಹೆಣ್ಣೂರ್ ಶ್ರೀನಿವಾಸ್, ಒಕ್ಕಲಿಗ ಸಂಘದ ಹನುಮಂತರಾಯಪ್ಪ, ಚಂದ್ರು ಪೆರಿಯಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರು ಒಕ್ಕಲಿಗ ಮತ್ತು ಹೊಲೆಯ ಸಮುದಾಯಗಳನ್ನು ಹೀನಾಯವಾಗಿ ನಿಂದಿಸಿರುವುದನ್ನು ಖಂಡಿಸಿ ಅ.1ರಂದು ಶೂದ್ರ, ದಲಿತರ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.</p>.<p>ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಮಾವೇಶ ಕುರಿತು ಶುಕ್ರವಾರ ಸಭೆ ನಡೆಸಿದ ಸಮುದಾಯಗಳ ಮುಖಂಡರು, ಸಾಹಿತಿಗಳು, ಚಿಂತಕರು, ಹೋರಾಟಗಾರರು ಮತ್ತು ವಿದ್ಯಾರ್ಥಿ ಮುಖಂಡರು ಈ ತೀರ್ಮಾನ ಮಾಡಿದ್ದಾರೆ.</p>.<p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರು ಈ ರೀತಿ ಜಾತಿ ವಿರೋಧಿ ಹೇಳಿಕೆಗಳನ್ನು ಕೊಡುವುದು ಸಂವಿಧಾನ ವಿರೋಧಿ ಮತ್ತು ಕಾನೂನು ಬಾಹಿರವಾಗಿರುತ್ತದೆ. ಈ ಹೇಳಿಕೆಗಳಿಂದ ಒಕ್ಕಲಿಗ ಮತ್ತು ದಲಿತ ಸಮುದಾಯಗಳ ಭಾವನೆಗಳಿಗೆ ಘಾಸಿಯುಂಟಾಗಿದೆ. ಇದನ್ನು ಖಂಡಿಸಿ ಸಮಾವೇಶ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದ್ದಾರೆ. </p>.<p>ಸಭೆಯಲ್ಲಿ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ನಟ ಶ್ರೀನಗರ ಕಿಟ್ಟಿ, ಬಿ. ಗೋಪಾಲ್, ಬಸವರಾಜ್ ಕೌತಾಳ್, ಹೆಣ್ಣೂರ್ ಶ್ರೀನಿವಾಸ್, ಒಕ್ಕಲಿಗ ಸಂಘದ ಹನುಮಂತರಾಯಪ್ಪ, ಚಂದ್ರು ಪೆರಿಯಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>