ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಬಸವಣ್ಣನವರ ನೆನಪು ನಮ್ಮೆಲ್ಲರಲ್ಲೂ ಶಾಶ್ವತವಾಗಿ ಉಳಿಯಬೇಕು. ಸೋಮೇಶ್ವರ ದೇವಸ್ಥಾನದ ಬಳಿ ಈಗಾಗಲೆ ಬಸವಭವನ ಹಾಗೂ ಸಮುದಾಯಭವನ ನಿರ್ಮಿಸಿ ಲೋಕಾರ್ಪಣೆ ಮಾಡಲಾಗಿದೆ. ಯಲಹಂಕದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬಸವಣ್ಣನವರ 6 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.