ಈ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ಶಿವಕುಮಾರ ಸ್ವಾಮೀಜಿ ಅವರ ಬದುಕು ತ್ಯಾಗದಿಂದ ಕೂಡಿತ್ತು. ಪೂಜೆ, ಸೇವೆಯ ಪ್ರತಿಫಲದಿಂದ ಅವರು 111 ವರ್ಷ ಬದುಕಿದರು. ಅವರು ಪ್ರತಿಯೊಂದು ಕೆಲಸವನ್ನು ಶ್ರದ್ಧೆ, ಭಕ್ತಿಯಿಂದ ಮಾಡುತ್ತಿದ್ದರು. ಗ್ರಾಮೀಣ ಭಾಗದಲ್ಲಿಯೂ ಶಾಲೆಗಳನ್ನು ಆರಂಭಿಸುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾದರು. ಜಾತಿ, ಮತದ ಭೇದಭಾವ ನೋಡದೆ ಎಲ್ಲ ಜಾತಿಯ ಮಕ್ಕಳಿಗೆ ಆಶ್ರಯ ನೀಡಿ, ಸಂಸ್ಕೃತ ಭಾಷೆಯನ್ನು ಎಲ್ಲರಿಗೂ ಕಲಿಸಿದರು’ ಎಂದು ಹೇಳಿದರು.