ಬೆಂಗಳೂರು: ‘ಕೆ.ಜಿ.ಹಳ್ಳಿ, ಡಿ.ಜೆ. ಹಳ್ಳಿ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ. ದಿನಕ್ಕೊಬ್ಬ ಸಚಿವರು, ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.