<p><strong>ಬೆಂಗಳೂರು</strong>: ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>.<p>ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹೊನ್ನಾರು ರಂಗೋತ್ಸವವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಉಮಾಶ್ರೀ, ಪ್ರಕಾಶ್ ರಾಜ್ ಸೇರಿದಂತೆ ಬಹುತೇಕ ರಂಗಭೂಮಿ ಕಲಾವಿದರು ಚಲನಚಿತ್ರ ಕ್ಷೇತ್ರದಲ್ಲಿ ಬೆಳೆದಿದ್ದಾರೆ. ರಂಗಭೂಮಿಯಲ್ಲಿ ಕೆಲಸ ಮಾಡಿದವರೇ ಸಿನಿಮಾರಂಗದಲ್ಲಿಯೂ ಹೆಸರು ಮಾಡಿದ್ದಾರೆ ಎಂದು ಹೇಳಿದರು.</p>.<p>ಹಿಂದಿನ ಸಿನಿಮಾಗಳಲ್ಲಿ ಉತ್ತಮ ಸಂದೇಶಗಳಿರುತ್ತಿದ್ದವು. ಈಗ ಉತ್ತಮ ಸಂದೇಶಗಳ ಸಿನಿಮಾಗಳು ಇಲ್ಲವಾಗಿವೆ. ಕುಟುಂಬ ಸಮೇತ ನೋಡುವ ಸಿನಿಮಾಗಳೂ ಬರುತ್ತಿಲ್ಲ. ಅಲ್ಲದೇ ಮೊಬೈಲ್, ಟಿ.ವಿ.ಗಳಿಂದಾಗಿ ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡುವ ಅಭಿರುಚಿ ಇಲ್ಲವಾಗಿದೆ ಎಂದರು.</p>.<p>ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಚಿತ್ರನಟರಾದ ಮುಖ್ಯಮಂತ್ರಿ ಚಂದ್ರು, ಪ್ರಕಾಶ್ ರಾಜ್, ಕಲಾವಿದರಾದ ದತ್ತಣ್ಣ, ಗಿರಿಜಾ ಲೋಕೇಶ್, ನಿರ್ದೇಶಕ ಟಿ.ಎಸ್. ನಾಗಾಭರಣ, ಹೊನ್ನಾರು ರಂಗೋತ್ಸವ ಸಂಚಾಲಕರಾದ ಶ್ರೀನಿವಾಸ ಜಿ. ಕಪ್ಪಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>.<p>ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹೊನ್ನಾರು ರಂಗೋತ್ಸವವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಉಮಾಶ್ರೀ, ಪ್ರಕಾಶ್ ರಾಜ್ ಸೇರಿದಂತೆ ಬಹುತೇಕ ರಂಗಭೂಮಿ ಕಲಾವಿದರು ಚಲನಚಿತ್ರ ಕ್ಷೇತ್ರದಲ್ಲಿ ಬೆಳೆದಿದ್ದಾರೆ. ರಂಗಭೂಮಿಯಲ್ಲಿ ಕೆಲಸ ಮಾಡಿದವರೇ ಸಿನಿಮಾರಂಗದಲ್ಲಿಯೂ ಹೆಸರು ಮಾಡಿದ್ದಾರೆ ಎಂದು ಹೇಳಿದರು.</p>.<p>ಹಿಂದಿನ ಸಿನಿಮಾಗಳಲ್ಲಿ ಉತ್ತಮ ಸಂದೇಶಗಳಿರುತ್ತಿದ್ದವು. ಈಗ ಉತ್ತಮ ಸಂದೇಶಗಳ ಸಿನಿಮಾಗಳು ಇಲ್ಲವಾಗಿವೆ. ಕುಟುಂಬ ಸಮೇತ ನೋಡುವ ಸಿನಿಮಾಗಳೂ ಬರುತ್ತಿಲ್ಲ. ಅಲ್ಲದೇ ಮೊಬೈಲ್, ಟಿ.ವಿ.ಗಳಿಂದಾಗಿ ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡುವ ಅಭಿರುಚಿ ಇಲ್ಲವಾಗಿದೆ ಎಂದರು.</p>.<p>ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಚಿತ್ರನಟರಾದ ಮುಖ್ಯಮಂತ್ರಿ ಚಂದ್ರು, ಪ್ರಕಾಶ್ ರಾಜ್, ಕಲಾವಿದರಾದ ದತ್ತಣ್ಣ, ಗಿರಿಜಾ ಲೋಕೇಶ್, ನಿರ್ದೇಶಕ ಟಿ.ಎಸ್. ನಾಗಾಭರಣ, ಹೊನ್ನಾರು ರಂಗೋತ್ಸವ ಸಂಚಾಲಕರಾದ ಶ್ರೀನಿವಾಸ ಜಿ. ಕಪ್ಪಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>