‘ಊರುಗಳಿಗೆ ಹೋಗಲು ನಿರ್ಧರಿಸಿರುವ ಕಾರ್ಮಿಕರನ್ನು ಮೆಜೆಸ್ಟಿಕ್ನಿಂದ ಅರಮನೆ ಮೈದಾನಕ್ಕೆ ಅಲ್ಲಿಂದ ಪೀಣ್ಯಕ್ಕೆ ಅಲೆದಾಟ ನಡೆಸಲಾಗುತ್ತಿದೆ. ಅನ್ನ, ನೀರು ಇಲ್ಲದೆ, ಮಲಗಲು ಜಾಗವಿಲ್ಲದೆ ಬಸ್ ನಿಲ್ದಾಣದಲ್ಲಿ ಮಹಿಳೆಯರು, ಮಕ್ಕಳು ಪರದಾಡುತ್ತಿರುವುದನ್ನು ನೋಡಿಯೂ ಸರ್ಕಾರಕ್ಕೆ ಕನಿಕರ ಬರುತ್ತಿಲ್ಲ. ಕಾರ್ಮಿಕರ ಪ್ರಯಾಣಕ್ಕೆ ತಗಲಬಹುದಾದ ₹ 3 ಕೋಟಿ ಭರಿಸುವ ಶಕ್ತಿ ಸರ್ಕಾರಕ್ಕಿಲ್ಲವೇ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಈವರೆಗೆ ಬಂದಿರುವ ದೇಣಿಗೆ ಎಷ್ಟು ಎಂಬ ಬಗ್ಗೆಯೂ ಮಾಹಿತಿ ಇಲ್ಲ’ ಎಂದು ಅವರು ಹೇಳಿದರು.