<p><strong>ಬೆಂಗಳೂರು:</strong>‘ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ₹50 ಲಕ್ಷ ಮೊತ್ತದವರೆಗಿನ ಕಾಮಗಾರಿಯ ಗುತ್ತಿಗೆಯಲ್ಲಿ ಶೇ 24.1ರಷ್ಟು ಮೀಸಲಾತಿಯನ್ನು ನೀಡಲಾಗುತ್ತಿದೆ. ಈ ಮಿತಿಯನ್ನು ₹2 ಕೋಟಿಯವರೆಗೂ ಏರಿಸಲು ಒತ್ತಡ ಹೇರಲಾಗುವುದು’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭರವಸೆ ನೀಡಿದರು.</p>.<p>ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಜ್ಯ ಎಸ್ಸಿ/ಎಸ್ಟಿ ಗುತ್ತಿಗೆದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಈ ಮಿತಿಯನ್ನು ₹1 ಕೋಟಿಗೆ ಏರಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಿದ್ದೆ. ಅದು ಇನ್ನೂ ಜಾರಿಯಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತನಾಡಿ, ಶೀಘ್ರದಲ್ಲಿ ಅನುಷ್ಠಾನಕ್ಕೆ ಬರುವಂತೆ ಮಾಡುತ್ತೇನೆ’ ಎಂದು ಹೇಳಿದರು.</p>.<p>‘ಜನಸಂಖ್ಯೆಗೆ ಅನುಗುಣವಾಗಿ ಸಂಪತ್ತು ಹಂಚಿಕೆಯಾಗಬೇಕು. ಹೀಗಾಗಿ, ಗುತ್ತಿಗೆಯಲ್ಲಿಯೂ ಮೀಸಲಾತಿ ನೀಡಿದ್ದೇವೆ. ಈ ಕುರಿತು ಕಾನೂನು ಜಾರಿ ಮಾಡಿದ ಮೊದಲ ರಾಜ್ಯ ನಮ್ಮದು’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>‘ಬಡ್ತಿಯಲ್ಲಿ ಮೀಸಲಾತಿ ತರುವುದಕ್ಕೆ ಮುಂದಾಗಲೂ ಕೆಲವರು ವಿರೋಧ ವ್ಯಕ್ತಪಡಿಸಿದರು. ಸುಪ್ರೀಂ ಕೋರ್ಟ್ಗೆ ಹೋದರು. ಈ ಕುರಿತು ನಾವೇ ಕಾನೂನು ರೂಪಿಸಿ, ರಾಷ್ಟ್ರಪತಿ ಅಂಕಿತ ಪಡೆಯಲಾಯಿತು. ಸುಪ್ರೀಂ ಕೋರ್ಟ್ ಕೂಡ ಬಡ್ತಿ ಮೀಸಲಾತಿ ಆದೇಶವನ್ನು ಎತ್ತಿ ಹಿಡಿದಿದೆ’ ಎಂದರು.</p>.<p>ರಾಜ್ಯ ಎಸ್ಸಿ,ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹಾದೇವ ಸ್ವಾಮಿ ಮಾತನಾಡಿ, ‘₹1 ಕೋಟಿಯವರೆಗಿನ ಕಾಮಗಾರಿಯ ಗುತ್ತಿಗೆಯಲ್ಲಿಯೂ ಮೀಸಲಾತಿ ದೊರಕಿಸುವುದಕ್ಕೆ ಮುಂದಿನ ಅಧಿವೇಶನದಲ್ಲಿಯೇ ಅನುಮೋದನೆ ದೊರಕಿಸಿ, ಜಾರಿ ಮಾಡಿಸಬೇಕು’ ಎಂದು ವಿನಂತಿಸಿದರು.</p>.<p>‘ಗುತ್ತಿಗೆಯಲ್ಲಿ ಮೀಸಲಾತಿ ದೊರೆತ ನಂತರ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಆರ್ಥಿಕವಾಗಿ ಅಭಿವೃದ್ಧಿಯಾಗಿದ್ದಾರೆ. ಮೊದಲು 3 ಸಾವಿರ ಗುತ್ತಿಗೆದಾರರಿದ್ದರು. ಈಗ ಅವರ ಸಂಖ್ಯೆ 10 ಸಾವಿರಕ್ಕೆ ಏರಿದೆ’ ಎಂದರು.</p>.<p><strong>‘ಕೇಂದ್ರ ₹2 ಲಕ್ಷ ಕೋಟಿ ನೀಡಲಿ’</strong></p>.<p>‘ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನಾ ಕಾಯ್ದೆಯಡಿ, ಈ ಸಮುದಾಯದ ಅಭಿವೃದ್ಧಿಗಾಗಿ ಐದು ವರ್ಷಗಳಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ₹86 ಸಾವಿರ ಕೋಟಿ ಖರ್ಚು ಮಾಡಲಾಗಿತ್ತು. ಈ ವರ್ಷ ₹30 ಸಾವಿರ ಕೋಟಿ ಇಟ್ಟಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ₹56 ಸಾವಿರ ಕೋಟಿ ಮಾತ್ರ ತೆಗೆದಿರಿಸಿದೆ. ಕೇಂದ್ರ ಸರ್ಕಾರ ಕನಿಷ್ಠ 2 ಲಕ್ಷ ಕೋಟಿಯಾದರೂ ನೀಡಬೇಕು’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>***</p>.<p>ಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟಿದ್ದು ಧರ್ಮಸ್ಥಳದ ಮಂಜುನಾಥ ಅಲ್ಲ. ನಮ್ಮ ಸಿದ್ದರಾಮಯ್ಯ. ಈ ಸಂದರ್ಭದಲ್ಲಿ ನಾವು ಅವರ ಕೈ ಬಲಪಡಿಸುವ ಅಗತ್ಯವಿದೆ.</p>.<p><em><strong>– ಮಹಾದೇವ ಸ್ವಾಮಿ,ರಾಜ್ಯ ಎಸ್ಸಿ/ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ₹50 ಲಕ್ಷ ಮೊತ್ತದವರೆಗಿನ ಕಾಮಗಾರಿಯ ಗುತ್ತಿಗೆಯಲ್ಲಿ ಶೇ 24.1ರಷ್ಟು ಮೀಸಲಾತಿಯನ್ನು ನೀಡಲಾಗುತ್ತಿದೆ. ಈ ಮಿತಿಯನ್ನು ₹2 ಕೋಟಿಯವರೆಗೂ ಏರಿಸಲು ಒತ್ತಡ ಹೇರಲಾಗುವುದು’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭರವಸೆ ನೀಡಿದರು.</p>.<p>ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಜ್ಯ ಎಸ್ಸಿ/ಎಸ್ಟಿ ಗುತ್ತಿಗೆದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಈ ಮಿತಿಯನ್ನು ₹1 ಕೋಟಿಗೆ ಏರಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಿದ್ದೆ. ಅದು ಇನ್ನೂ ಜಾರಿಯಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತನಾಡಿ, ಶೀಘ್ರದಲ್ಲಿ ಅನುಷ್ಠಾನಕ್ಕೆ ಬರುವಂತೆ ಮಾಡುತ್ತೇನೆ’ ಎಂದು ಹೇಳಿದರು.</p>.<p>‘ಜನಸಂಖ್ಯೆಗೆ ಅನುಗುಣವಾಗಿ ಸಂಪತ್ತು ಹಂಚಿಕೆಯಾಗಬೇಕು. ಹೀಗಾಗಿ, ಗುತ್ತಿಗೆಯಲ್ಲಿಯೂ ಮೀಸಲಾತಿ ನೀಡಿದ್ದೇವೆ. ಈ ಕುರಿತು ಕಾನೂನು ಜಾರಿ ಮಾಡಿದ ಮೊದಲ ರಾಜ್ಯ ನಮ್ಮದು’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>‘ಬಡ್ತಿಯಲ್ಲಿ ಮೀಸಲಾತಿ ತರುವುದಕ್ಕೆ ಮುಂದಾಗಲೂ ಕೆಲವರು ವಿರೋಧ ವ್ಯಕ್ತಪಡಿಸಿದರು. ಸುಪ್ರೀಂ ಕೋರ್ಟ್ಗೆ ಹೋದರು. ಈ ಕುರಿತು ನಾವೇ ಕಾನೂನು ರೂಪಿಸಿ, ರಾಷ್ಟ್ರಪತಿ ಅಂಕಿತ ಪಡೆಯಲಾಯಿತು. ಸುಪ್ರೀಂ ಕೋರ್ಟ್ ಕೂಡ ಬಡ್ತಿ ಮೀಸಲಾತಿ ಆದೇಶವನ್ನು ಎತ್ತಿ ಹಿಡಿದಿದೆ’ ಎಂದರು.</p>.<p>ರಾಜ್ಯ ಎಸ್ಸಿ,ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹಾದೇವ ಸ್ವಾಮಿ ಮಾತನಾಡಿ, ‘₹1 ಕೋಟಿಯವರೆಗಿನ ಕಾಮಗಾರಿಯ ಗುತ್ತಿಗೆಯಲ್ಲಿಯೂ ಮೀಸಲಾತಿ ದೊರಕಿಸುವುದಕ್ಕೆ ಮುಂದಿನ ಅಧಿವೇಶನದಲ್ಲಿಯೇ ಅನುಮೋದನೆ ದೊರಕಿಸಿ, ಜಾರಿ ಮಾಡಿಸಬೇಕು’ ಎಂದು ವಿನಂತಿಸಿದರು.</p>.<p>‘ಗುತ್ತಿಗೆಯಲ್ಲಿ ಮೀಸಲಾತಿ ದೊರೆತ ನಂತರ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಆರ್ಥಿಕವಾಗಿ ಅಭಿವೃದ್ಧಿಯಾಗಿದ್ದಾರೆ. ಮೊದಲು 3 ಸಾವಿರ ಗುತ್ತಿಗೆದಾರರಿದ್ದರು. ಈಗ ಅವರ ಸಂಖ್ಯೆ 10 ಸಾವಿರಕ್ಕೆ ಏರಿದೆ’ ಎಂದರು.</p>.<p><strong>‘ಕೇಂದ್ರ ₹2 ಲಕ್ಷ ಕೋಟಿ ನೀಡಲಿ’</strong></p>.<p>‘ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನಾ ಕಾಯ್ದೆಯಡಿ, ಈ ಸಮುದಾಯದ ಅಭಿವೃದ್ಧಿಗಾಗಿ ಐದು ವರ್ಷಗಳಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ₹86 ಸಾವಿರ ಕೋಟಿ ಖರ್ಚು ಮಾಡಲಾಗಿತ್ತು. ಈ ವರ್ಷ ₹30 ಸಾವಿರ ಕೋಟಿ ಇಟ್ಟಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ₹56 ಸಾವಿರ ಕೋಟಿ ಮಾತ್ರ ತೆಗೆದಿರಿಸಿದೆ. ಕೇಂದ್ರ ಸರ್ಕಾರ ಕನಿಷ್ಠ 2 ಲಕ್ಷ ಕೋಟಿಯಾದರೂ ನೀಡಬೇಕು’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>***</p>.<p>ಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟಿದ್ದು ಧರ್ಮಸ್ಥಳದ ಮಂಜುನಾಥ ಅಲ್ಲ. ನಮ್ಮ ಸಿದ್ದರಾಮಯ್ಯ. ಈ ಸಂದರ್ಭದಲ್ಲಿ ನಾವು ಅವರ ಕೈ ಬಲಪಡಿಸುವ ಅಗತ್ಯವಿದೆ.</p>.<p><em><strong>– ಮಹಾದೇವ ಸ್ವಾಮಿ,ರಾಜ್ಯ ಎಸ್ಸಿ/ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>