<p><strong>ಬೆಂಗಳೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ಮಾಜಿ ಸೈನಿಕ, ಹಾಸನ ಜಿಲ್ಲೆ ಸಕಲೇಶಪುರದ ನಿವಾಸಿ ವಸಂತಕುಮಾರ್ ಅವರನ್ನು ಸಿಸಿಬಿಯ ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.</p>.<p>ವಸಂತಕುಮಾರ್ ಅವರು ಸೇನೆಯಿಂದ ನಿವೃತ್ತರಾದ ಬಳಿಕ ಸಕಲೇಶಪುರ ಸಮೀಪದ ಗ್ರಾಮವೊಂದರಲ್ಲಿ ವ್ಯವಸಾಯ ಮಾಡಿಕೊಂಡಿದ್ದರು. ಐ.ಪಿ ವಿಳಾಸ ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p>ಮೈಸೂರು ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುವಾಗ ದ್ರೌಪದಿ ಮುರ್ಮು ಅವರನ್ನು ಕನ್ನಡ ಬರುತ್ತಾ ಎಂಬುದಾಗಿ ಕೇಳಿದ್ದರು. ಈ ರೀತಿ ಪ್ರಶ್ನೆ ಮಾಡಿದ್ದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.</p>.<p>ಆರೋಪಿ ವಸಂತಕುಮಾರ್ ಅವರು ಫೇಸ್ಬುಕ್ನ ಹನುಮಂತ ಭಕ್ತ ಎಂಬ ಖಾತೆಯಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದರು. ಈ ಸಂಬಂಧ ಬಂದ ದೂರು ಆಧರಿಸಿ, ಸಿಸಿಬಿಯ ಸಾಮಾಜಿಕ ಜಾಲತಾಣಗಳ ನಿರ್ವಹಣಾ ವಿಭಾಗದ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ಮಾಜಿ ಸೈನಿಕ, ಹಾಸನ ಜಿಲ್ಲೆ ಸಕಲೇಶಪುರದ ನಿವಾಸಿ ವಸಂತಕುಮಾರ್ ಅವರನ್ನು ಸಿಸಿಬಿಯ ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.</p>.<p>ವಸಂತಕುಮಾರ್ ಅವರು ಸೇನೆಯಿಂದ ನಿವೃತ್ತರಾದ ಬಳಿಕ ಸಕಲೇಶಪುರ ಸಮೀಪದ ಗ್ರಾಮವೊಂದರಲ್ಲಿ ವ್ಯವಸಾಯ ಮಾಡಿಕೊಂಡಿದ್ದರು. ಐ.ಪಿ ವಿಳಾಸ ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p>ಮೈಸೂರು ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುವಾಗ ದ್ರೌಪದಿ ಮುರ್ಮು ಅವರನ್ನು ಕನ್ನಡ ಬರುತ್ತಾ ಎಂಬುದಾಗಿ ಕೇಳಿದ್ದರು. ಈ ರೀತಿ ಪ್ರಶ್ನೆ ಮಾಡಿದ್ದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.</p>.<p>ಆರೋಪಿ ವಸಂತಕುಮಾರ್ ಅವರು ಫೇಸ್ಬುಕ್ನ ಹನುಮಂತ ಭಕ್ತ ಎಂಬ ಖಾತೆಯಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದರು. ಈ ಸಂಬಂಧ ಬಂದ ದೂರು ಆಧರಿಸಿ, ಸಿಸಿಬಿಯ ಸಾಮಾಜಿಕ ಜಾಲತಾಣಗಳ ನಿರ್ವಹಣಾ ವಿಭಾಗದ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>