ಬೆಂಗಳೂರು: ಮದ್ಯದಂಗಡಿ ತೆರೆದದ್ದು ಮುಖ್ಯಮಂತ್ರಿಯವರ ಅವಸರದ ಮತ್ತು ಪೂರ್ವ ಸಿದ್ಧತೆ ಇಲ್ಲದ ನಿರ್ಧಾರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಹುತೇಕ ಕಡೆಗಳಲ್ಲಿ ಜನರು ಅಂತರವನ್ನು ಪಾಲಿಸಿಲ್ಲ. ಇದರಿಂದ ಕೊರೊನಾ ಸೊಂಕು ಉಲ್ಭಣಿಸಿದರೆ ರಾಜ್ಯ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಅವರ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ತಕ್ಷಣವೇ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದರು. ಈಗ ತಮ್ಮ ವರಸೆ ಬದಲಿಸಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ಮದ್ಯದಂಗಡಿ ತೆರೆದದ್ದು @CMofKarnataka ಅವರ ಅವಸರದ ಮತ್ತು ಪೂರ್ವ ಸಿದ್ದತೆಯಿಲ್ಲದ ನಿರ್ಧಾರ. ಬಹುತೇಕ ಕಡೆಗಳಲ್ಲಿ ಸಾಮಾಜಿಕ ಅಂತರವನ್ನು ಜನ ಪಾಲಿಸಿದಂತೆ ಕಾಣುತ್ತಿಲ್ಲ. ಇದರಿಂದಾಗಿ ಕೊರೋನಾ ಸೋಂಕು ಉಲ್ಭಣಿದರೆ ಅದರ ಪೂರ್ಣ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕಾಗುತ್ತದೆ, 6/7#TrialandErrorSarkar