<p><strong>ಬೆಂಗಳೂರು:</strong>ಬಸವತತ್ವಗಳನ್ನು ಅನುಸರಿಸುವವ ಮತ್ತು ಅವರ ಪ್ರಬಲ ಸಿದ್ಧಾಂತಗಳ ಪ್ರತಿಪಾದಕ ನಾನು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದರು.</p>.<p>‘ಅಸಂಖ್ಯ ಪ್ರಮಥರ ಗಣಮೇಳ’ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ವೈದಿಕ ಧರ್ಮಕ್ಕೆ ಪರ್ಯಾಯವಾಗಿ, ವೈಚಾರಿಕವಾಗಿ, ಧರ್ಮಾತೀತವಾಗಿ ಮತ್ತು ಜಾತ್ಯತೀತ, ಕರ್ಮ ಸಿದ್ಧಾಂತ, ಕಂದಾಚಾರ, ಮೌಢ್ಯಗಳನ್ನು ದೂರವಿಟ್ಟ ಧರ್ಮ ಎಂದರೆ ಅದು ಬಸವಾದಿ ಶಿವಶರಣರ ಲಿಂಗಾಯತ ಧರ್ಮ’ಎಂದು ಅಭಿಪ್ರಾಯಪಟ್ಟರು.</p>.<p>‘ಬಸವಣ್ಣನವರ ಕಾಲದಲ್ಲಿ ಮಾಡಿದ ಅಸಂಖ್ಯ ಪ್ರಮಥರ ಗಣಮೇಳವನ್ನು ಇಂದು ಶಿವಮೂರ್ತಿ ಶರಣರು ಮರುಕಳಿಸಿದ್ದಾರೆ. ಇಡೀ ಸಮಾಜದ ಶ್ಲಾಘನೆಗೆ ಪಾತ್ರರಾಗಿದ್ದಾರೆ. 900 ವರ್ಷಗಳ ನಂತರ ಜಗತ್ತಿನ ಸಾಮಾಜಿಕ ವ್ಯವಸ್ಥೆಗೆ ಪರಿವರ್ತನೆಗೆ ಇಂತಹ ಸಮಾವೇಶಗಳು ಪ್ರಸ್ತುತ ಹಾಗೂ ಅವಶ್ಯ’ಎಂದರು.</p>.<p>‘ನಮ್ಮ ದೇಶ ಅನೇಕ ಜನ ಸಮಾಜ ಸುಧಾರಕರನ್ನು, ದಾರ್ಶನಿಕರನ್ನು, ಸಂತರನ್ನು, ಶರಣರನ್ನು, ಸೂಫಿಗಳನ್ನು ನೀಡಿದೆ. ಅವರೆಲ್ಲಾ ಸಮಾಜದ ಪರಿವರ್ತನೆಗೆ, ಬದಲಾವಣೆಗೆ, ಮಾನವೀಯ ಮೌಲ್ಯಗಳ ಸ್ಥಾಪನೆಗೆ ಶತಮಾನಗಳಿಂದ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಜಾತಿ ವ್ಯವಸ್ಥೆಯನ್ನು, ಅಸಮಾನತೆಯನ್ನು ತೊಡೆದು ಹಾಕಿ ಲೋಕಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ’ಎಂದರು.</p>.<p>‘ಇವನಾರವ ಇವನಾರವ ಎಂದು ಕೇಳುತ್ತಿರುವ ಇಂದಿನ ದಿನಗಳಲ್ಲಿ ನಾವೆಲ್ಲಾ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ವಚನಗಳು ಪಠಣ ಮಾಡಲಿಕ್ಕೆ ಅಲ್ಲ. ನುಡಿದಂತೆ ನಡೆದವರು ಬಸವಾದಿ ಶರಣರು. ಸಮಾಧಾನಕರವಾಗಿ ಬಾಳಿದರೆ ಅದು ಸಾರ್ಥಕ. ಇಲ್ಲದಿದ್ದರೆ ನಿರರ್ಥಕ’ ಎಂದರು.</p>.<p>‘ನಮ್ಮ ಸಂವಿಧಾನದಲ್ಲಿ ಭೇದ ಭಾವಗಳಿಗೆ ಆಸ್ಪದವಿಲ್ಲ. ಅದು ಧರ್ಮ ನಿಷ್ಠೆ ಮತ್ತು ಪರಧರ್ಮ ಸಹಿಷ್ಣುತೆ ಸಾರುತ್ತದೆ. ಇದರಲ್ಲಿ ಅಗೌರವ, ಅಸಮಾನತೆಗೆ ಆಸ್ಪದವಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>‘ಶಿವಮೂರ್ತಿ ಮುರುಘಾ ಶರಣರು ನನಗೆ ನೈತಿಕ ಸ್ಥೈರ್ಯ ತುಂಬಿದ ಸ್ವಾಮೀಜಿಗಳ ಸಾಲಿನಲ್ಲಿ ಮೊದಲಿಗರಾಗಿ ನಿಲ್ಲುತ್ತಾರೆ. ನನ್ನ ಅಹಿಂದ ಸಮಾವೇಶಗಳ ಕಾಲದಿಂದಲೂ ಅವರು ನನಗೆ ಶಕ್ತಿ ತುಂಬಿದವರು. ಅವರನ್ನು ಮರೆಯಲು ಸಾಧ್ಯವಿಲ್ಲ’ಎಂದರು.</p>.<p>‘ಅಸಮಾನತೆ, ಬಡತನ, ಭೇದ ಭಾವ, ತಾರತಮ್ಯ, ಸಾಮಾಜಿಕ ಅಸಮಾನತೆ ಇದೆ. ಯಾಕೆ ಸಮಾನತೆ ಬಂದಿಲ್ಲ ಎಂದರೆ, ಜಾತಿ ವ್ಯವಸ್ಥೆ ಅದಕ್ಕೆ ಅಡ್ಡಿಯಾಗಿದೆ. ಅದಕ್ಕೆ ಚಲನೆ ನೀಡಬೇಕಿದೆ. ಸಮಸಮಾಜ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಮಾಮತೆ ಸಾಧಿಸಬೇಕು’ ಎಂದು ತಿಳಿಸಿದರು.</p>.<p>‘ಇಂದು ಎಲ್ಲೆಡೆ ಜಾತಿ ವ್ಯವಸ್ಥೆ ಗಟ್ಟಿಯಾಗಿ ಕೂತಿದೆ. ಇದು ಹೋಗಬೇಕು. ಇದಕ್ಕಾಗಿ ಇಂತಹ ಪ್ರಯತ್ನ ಶ್ಲಾಘನೀಯ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಬಸವತತ್ವಗಳನ್ನು ಅನುಸರಿಸುವವ ಮತ್ತು ಅವರ ಪ್ರಬಲ ಸಿದ್ಧಾಂತಗಳ ಪ್ರತಿಪಾದಕ ನಾನು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದರು.</p>.<p>‘ಅಸಂಖ್ಯ ಪ್ರಮಥರ ಗಣಮೇಳ’ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ವೈದಿಕ ಧರ್ಮಕ್ಕೆ ಪರ್ಯಾಯವಾಗಿ, ವೈಚಾರಿಕವಾಗಿ, ಧರ್ಮಾತೀತವಾಗಿ ಮತ್ತು ಜಾತ್ಯತೀತ, ಕರ್ಮ ಸಿದ್ಧಾಂತ, ಕಂದಾಚಾರ, ಮೌಢ್ಯಗಳನ್ನು ದೂರವಿಟ್ಟ ಧರ್ಮ ಎಂದರೆ ಅದು ಬಸವಾದಿ ಶಿವಶರಣರ ಲಿಂಗಾಯತ ಧರ್ಮ’ಎಂದು ಅಭಿಪ್ರಾಯಪಟ್ಟರು.</p>.<p>‘ಬಸವಣ್ಣನವರ ಕಾಲದಲ್ಲಿ ಮಾಡಿದ ಅಸಂಖ್ಯ ಪ್ರಮಥರ ಗಣಮೇಳವನ್ನು ಇಂದು ಶಿವಮೂರ್ತಿ ಶರಣರು ಮರುಕಳಿಸಿದ್ದಾರೆ. ಇಡೀ ಸಮಾಜದ ಶ್ಲಾಘನೆಗೆ ಪಾತ್ರರಾಗಿದ್ದಾರೆ. 900 ವರ್ಷಗಳ ನಂತರ ಜಗತ್ತಿನ ಸಾಮಾಜಿಕ ವ್ಯವಸ್ಥೆಗೆ ಪರಿವರ್ತನೆಗೆ ಇಂತಹ ಸಮಾವೇಶಗಳು ಪ್ರಸ್ತುತ ಹಾಗೂ ಅವಶ್ಯ’ಎಂದರು.</p>.<p>‘ನಮ್ಮ ದೇಶ ಅನೇಕ ಜನ ಸಮಾಜ ಸುಧಾರಕರನ್ನು, ದಾರ್ಶನಿಕರನ್ನು, ಸಂತರನ್ನು, ಶರಣರನ್ನು, ಸೂಫಿಗಳನ್ನು ನೀಡಿದೆ. ಅವರೆಲ್ಲಾ ಸಮಾಜದ ಪರಿವರ್ತನೆಗೆ, ಬದಲಾವಣೆಗೆ, ಮಾನವೀಯ ಮೌಲ್ಯಗಳ ಸ್ಥಾಪನೆಗೆ ಶತಮಾನಗಳಿಂದ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಜಾತಿ ವ್ಯವಸ್ಥೆಯನ್ನು, ಅಸಮಾನತೆಯನ್ನು ತೊಡೆದು ಹಾಕಿ ಲೋಕಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ’ಎಂದರು.</p>.<p>‘ಇವನಾರವ ಇವನಾರವ ಎಂದು ಕೇಳುತ್ತಿರುವ ಇಂದಿನ ದಿನಗಳಲ್ಲಿ ನಾವೆಲ್ಲಾ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ವಚನಗಳು ಪಠಣ ಮಾಡಲಿಕ್ಕೆ ಅಲ್ಲ. ನುಡಿದಂತೆ ನಡೆದವರು ಬಸವಾದಿ ಶರಣರು. ಸಮಾಧಾನಕರವಾಗಿ ಬಾಳಿದರೆ ಅದು ಸಾರ್ಥಕ. ಇಲ್ಲದಿದ್ದರೆ ನಿರರ್ಥಕ’ ಎಂದರು.</p>.<p>‘ನಮ್ಮ ಸಂವಿಧಾನದಲ್ಲಿ ಭೇದ ಭಾವಗಳಿಗೆ ಆಸ್ಪದವಿಲ್ಲ. ಅದು ಧರ್ಮ ನಿಷ್ಠೆ ಮತ್ತು ಪರಧರ್ಮ ಸಹಿಷ್ಣುತೆ ಸಾರುತ್ತದೆ. ಇದರಲ್ಲಿ ಅಗೌರವ, ಅಸಮಾನತೆಗೆ ಆಸ್ಪದವಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>‘ಶಿವಮೂರ್ತಿ ಮುರುಘಾ ಶರಣರು ನನಗೆ ನೈತಿಕ ಸ್ಥೈರ್ಯ ತುಂಬಿದ ಸ್ವಾಮೀಜಿಗಳ ಸಾಲಿನಲ್ಲಿ ಮೊದಲಿಗರಾಗಿ ನಿಲ್ಲುತ್ತಾರೆ. ನನ್ನ ಅಹಿಂದ ಸಮಾವೇಶಗಳ ಕಾಲದಿಂದಲೂ ಅವರು ನನಗೆ ಶಕ್ತಿ ತುಂಬಿದವರು. ಅವರನ್ನು ಮರೆಯಲು ಸಾಧ್ಯವಿಲ್ಲ’ಎಂದರು.</p>.<p>‘ಅಸಮಾನತೆ, ಬಡತನ, ಭೇದ ಭಾವ, ತಾರತಮ್ಯ, ಸಾಮಾಜಿಕ ಅಸಮಾನತೆ ಇದೆ. ಯಾಕೆ ಸಮಾನತೆ ಬಂದಿಲ್ಲ ಎಂದರೆ, ಜಾತಿ ವ್ಯವಸ್ಥೆ ಅದಕ್ಕೆ ಅಡ್ಡಿಯಾಗಿದೆ. ಅದಕ್ಕೆ ಚಲನೆ ನೀಡಬೇಕಿದೆ. ಸಮಸಮಾಜ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಮಾಮತೆ ಸಾಧಿಸಬೇಕು’ ಎಂದು ತಿಳಿಸಿದರು.</p>.<p>‘ಇಂದು ಎಲ್ಲೆಡೆ ಜಾತಿ ವ್ಯವಸ್ಥೆ ಗಟ್ಟಿಯಾಗಿ ಕೂತಿದೆ. ಇದು ಹೋಗಬೇಕು. ಇದಕ್ಕಾಗಿ ಇಂತಹ ಪ್ರಯತ್ನ ಶ್ಲಾಘನೀಯ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>