ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಗ್ನಲ್‌ಗೆ ಅಳವಡಿಸಿದ್ದ ಬ್ಯಾಟರಿ ಕಳವು

Last Updated 10 ನವೆಂಬರ್ 2021, 19:24 IST
ಅಕ್ಷರ ಗಾತ್ರ

ಬೆಂಗಳೂರು: ಅಶೋಕನಗರದ ನಂಜಪ್ಪ ವೃತ್ತದಲ್ಲಿ ಸಂಚಾರ ಸಿಗ್ನಲ್‌ಗೆ ಅಳವಡಿಸಿದ್ದ ಬ್ಯಾಟರಿಗಳನ್ನು ಕಳವು ಮಾಡಲಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

‘ಸಂಚಾರ ಠಾಣೆ ಎಎಸ್‌ಐ ಮಹದೇವಯ್ಯ ದೂರು ನೀಡಿದ್ದಾರೆ. ಕಳ್ಳತನ ಆರೋಪದಡಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವಾಹನಗಳ ಸುಗಮ ಸಂಚಾರಕ್ಕಾಗಿ ವೃತ್ತದಲ್ಲಿ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ. ಅದರ ಕಾರ್ಯನಿರ್ವಹಣೆಗೆ ಅಗತ್ಯವಾದ ವಿದ್ಯುತ್ ಪೂರೈಸಲು ಎರಡು ಬ್ಯಾಟರಿಗಳನ್ನು ಅಳವಡಿಸಲಾಗಿತ್ತು. ಅದೇ ಬ್ಯಾಟರಿಗಳನ್ನೇ ಕಳವು ಮಾಡಲಾಗಿದೆ.’

‘ಸಿಗ್ನಲ್ ಬಾಕ್ಸ್ ಮುರಿದಿರುವ ಅಪರಿಚಿತರು, ಅದರೊಳಗಿದ್ದ ಬ್ಯಾಟರಿಗಳನ್ನು ಕದ್ದೊಯ್ದಿದ್ದಾರೆ. ವೃತ್ತ ಹಾಗೂ ಅಕ್ಕ–ಪಕ್ಕದ ಸ್ಥಳದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT