ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪನಗರ ರೈಲು ಯೋಜನೆ: ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ

Published 15 ನವೆಂಬರ್ 2023, 18:20 IST
Last Updated 15 ನವೆಂಬರ್ 2023, 18:20 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್‌ಆರ್‌ಪಿ) ಕಾರ್ಯಗತಗೊಳಿಸಲು ರಾಜ್ಯ ಸರ್ಕಾರ, ಕೇಂದ್ರ ರೈಲ್ವೆ ಸಚಿವಾಲಯ ಮತ್ತು ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(ಕೆ–ರೈಡ್‌) ಅಧಿಕಾರಿಗಳು ತ್ರಿಪಕ್ಷೀಯ ಒಪ್ಪಂದಕ್ಕೆ ಬುಧವಾರ ಸಹಿ ಹಾಕಿದರು.

2018ರಲ್ಲಿ ರಾಷ್ಟ್ರೀಯ ಉಪನಗರ ರೈಲು ನೀತಿ ಜಾರಿಗೊಳಿಸಿದ ಬಳಿಕ ದೇಶದ ಮೊದಲ ಯೋಜನೆಯಾಗಿ ಬಿಎಸ್‌ಆರ್‌ಪಿಯನ್ನು ರೂಪಿಸಲಾಗಿತ್ತು. 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. ಬಳಿಕ ನಾಲ್ಕು ಕಾರಿಡಾರ್‌ಗಳಲ್ಲಿ ಎರಡನೇ ಕಾರಿಡಾರ್‌ ಕಾಮಗಾರಿ ಆರಂಭವಾಗಿತ್ತು.

ಬಾಹ್ಯ ಹಣಕಾಸು ಸಂಸ್ಥೆಗಳಿಂದ ಸಾಲದ ಒಪ್ಪಂದ ಸಹಿತ ಹಲವು ಕಾರ್ಯಗಳನ್ನು ಕೈಗೊಳ್ಳಲು ಈ ತ್ರಿಪಕ್ಷೀಯ ಒಪ್ಪಂದ ಅವಶ್ಯಕವಾಗಿತ್ತು ಎಂದು ಕೆ–ರೈಡ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT