<p><strong>ದಾಬಸ್ ಪೇಟೆ:</strong> ಸೋಂಪುರ ಹೋಬಳಿಯ ಮಾಕೇನಹಳ್ಳಿಯ ಶನಿಮಹಾತ್ಮ ದೇವಸ್ಥಾನದಲ್ಲಿ ಬೆಳ್ಳಿ ವಿಗ್ರಹ ಹಾಗೂ ಹುಂಡಿ ಹಣ ಕಳವು ಮಾಡಲಾಗಿದೆ. ಕಳ್ಳತನ ಬಳಿಕ ಕಳ್ಳರು ವಸ್ತುಗಳ ಮೇಲೆ ಕಾರದ ಪುಡಿ ಎರಚಿದ್ದಾರೆ.</p>.<p>ಬೆಳಿಗ್ಗೆ ಪೂಜೆಗಾಗಿ ಅರ್ಚಕ ವಿನೋದ್ ಅವರು ದೇವಾಲಯದ ಬಾಗಿಲು ತೆರೆಯಲು ಬಂದಾಗ ಕಳ್ಳತನ ಮಾಡಿರುವುದು ಗೊತ್ತಾಗಿದೆ. </p>.<p>6 ಕೆ.ಜಿ. ತೂಕದ ಬೆಳ್ಳಿಯ ಉತ್ಸವ ಮೂರ್ತಿ, ಹುಂಡಿಯಲ್ಲಿ ಹಣ ಹಾಗೂ ಕಾಗೆ ಕೊರಳಲ್ಲಿದ್ದ ಬೆಳ್ಳಿ ಸರ ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದಾರೆ. ವರ್ಷದ ಹಿಂದೆಯೂ ಹಣ ಮತ್ತು ವಸ್ತುಗಳನ್ನು ಕಳವು ಮಾಡಲಾಗಿತ್ತು. </p>.<p>ಸಿಸಿಟಿವಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಗಿತ್ತು. ಅಷ್ಟರಲ್ಲಿ ಕಳ್ಳತನವಾಗಿದೆ ಎಂದು ಅರ್ಚಕ ವಿನೋದ್ ತಿಳಿಸಿದರು.</p>.<p>‘ಮಧುಗಿರಿ ರಸ್ತೆಗೆ ಹೊಂದಿಕೊಂಡಂತೆ ದೇವಾಲಯ ಇದೆ. ಅಪಾರ ಭಕ್ತರನ್ನು ಹೊಂದಿರುವ ದೇವಾಲಯದಲ್ಲಿ ಕಳ್ಳತನ ಆಗಿರುವುದು ನೋವು ತರಿಸಿದೆ’ ಎಂದರು ದೇವಾಲಯದ ಭಕ್ತ ಸಂತೋಷ್.</p>.<p>ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ಸೋಂಪುರ ಹೋಬಳಿಯ ಮಾಕೇನಹಳ್ಳಿಯ ಶನಿಮಹಾತ್ಮ ದೇವಸ್ಥಾನದಲ್ಲಿ ಬೆಳ್ಳಿ ವಿಗ್ರಹ ಹಾಗೂ ಹುಂಡಿ ಹಣ ಕಳವು ಮಾಡಲಾಗಿದೆ. ಕಳ್ಳತನ ಬಳಿಕ ಕಳ್ಳರು ವಸ್ತುಗಳ ಮೇಲೆ ಕಾರದ ಪುಡಿ ಎರಚಿದ್ದಾರೆ.</p>.<p>ಬೆಳಿಗ್ಗೆ ಪೂಜೆಗಾಗಿ ಅರ್ಚಕ ವಿನೋದ್ ಅವರು ದೇವಾಲಯದ ಬಾಗಿಲು ತೆರೆಯಲು ಬಂದಾಗ ಕಳ್ಳತನ ಮಾಡಿರುವುದು ಗೊತ್ತಾಗಿದೆ. </p>.<p>6 ಕೆ.ಜಿ. ತೂಕದ ಬೆಳ್ಳಿಯ ಉತ್ಸವ ಮೂರ್ತಿ, ಹುಂಡಿಯಲ್ಲಿ ಹಣ ಹಾಗೂ ಕಾಗೆ ಕೊರಳಲ್ಲಿದ್ದ ಬೆಳ್ಳಿ ಸರ ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದಾರೆ. ವರ್ಷದ ಹಿಂದೆಯೂ ಹಣ ಮತ್ತು ವಸ್ತುಗಳನ್ನು ಕಳವು ಮಾಡಲಾಗಿತ್ತು. </p>.<p>ಸಿಸಿಟಿವಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಗಿತ್ತು. ಅಷ್ಟರಲ್ಲಿ ಕಳ್ಳತನವಾಗಿದೆ ಎಂದು ಅರ್ಚಕ ವಿನೋದ್ ತಿಳಿಸಿದರು.</p>.<p>‘ಮಧುಗಿರಿ ರಸ್ತೆಗೆ ಹೊಂದಿಕೊಂಡಂತೆ ದೇವಾಲಯ ಇದೆ. ಅಪಾರ ಭಕ್ತರನ್ನು ಹೊಂದಿರುವ ದೇವಾಲಯದಲ್ಲಿ ಕಳ್ಳತನ ಆಗಿರುವುದು ನೋವು ತರಿಸಿದೆ’ ಎಂದರು ದೇವಾಲಯದ ಭಕ್ತ ಸಂತೋಷ್.</p>.<p>ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>