<p><strong>ಬೆಂಗಳೂರು</strong>: ದೇಶ ಕಟ್ಟುವಲ್ಲಿ ಎಂಜಿನಿಯರ್ಗಳ ಪಾತ್ರ ಹಿರಿದಾಗಿದೆ. ರಾಜ್ಯವನ್ನು ಸಮೃದ್ದವನ್ನಾಗಿಸುವ, ಅಭಿವೃದ್ದಿಯ ಪಥದಲ್ಲಿ ಸಾಗುವಂತೆ ಮಾಡಿದ ಕೀರ್ತಿ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಸಲ್ಲುತ್ತದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹತ್ ತಿಳಿಸಿದರು.</p>.<p>ಜಲಮಂಡಳಿ ಅಭಿಯಂತರರ ಸಂಘದ ವತಿಯಿಂದ ಆಯೋಜಿಸಿದ್ದ ‘ಅಭಿಯಂತರರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದರು.</p>.<p>ಮೈಸೂರು ಮಹಾರಾಜರ ನಾಯಕತ್ವದಲ್ಲಿ ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಯೋಜನೆಗಳಿಂದಾಗಿ ರಾಜ್ಯ ಬಹಳಷ್ಟು ಕ್ಷೇತ್ರಗಳಲ್ಲಿ ಮೊದಲನೇ ಸ್ಥಾನದಲ್ಲಿದೆ. ಸರ್ ಎಂ.ವಿ ಅವರ ದೂರದೃಷ್ಟಿಯ ಪರಿಣಾಮದಿಂದಾಗಿ ಬೆಂಗಳೂರು ನಗರಕ್ಕೆ ಸಮರ್ಪಕ ನೀರು ಸರಬರಾಜು ಆಗುತ್ತಿದೆ ಎಂದು ಹೇಳಿದರು.</p>.<p>ಅಂತರ್ಜಲ ಕುಸಿತದಿಂದ ಬೇಸಿಗೆಯಲ್ಲಿ ಉಂಟಾಗಿದ್ದ ನೀರಿನ ಕೊರತೆಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಜಲಮಂಡಳಿ ಯಶಸ್ವಿಯಾಯಿತು ಎಂದರು.</p>.<p>ಇತಿಹಾಸಕಾರ ಧರ್ಮೇಂದ್ರ ಕುಮಾರ್ ಮಾತನಾಡಿ, ಸರ್ ಎಂವಿ ಅವರು ತಮ್ಮ ಕಾಲಾವಧಿಯಲ್ಲಿ ಹಲವಾರು ದೂರದೃಷ್ಟಿಯ ಕಾರ್ಯಗಳನ್ನು ಕೈಗೊಂಡು ಅನುಷ್ಠಾನಗೊಳಿಸಿದರು. ಬೆಂಗಳೂರು ನಗರ, ಮೈಸೂರು ರಾಜ್ಯ, ಕರ್ನಾಟಕ ರಾಜ್ಯ ಅಭಿವೃದ್ದಿಗೊಳ್ಳಲು ಸಮರ್ಥ ಯೋಜನೆಯನ್ನು ರೂಪಿಸಿದರು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದೆ ಸುಧಾ ಬರಗೂರು, ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘದ ಅಧ್ಯಕ್ಷ ಬಿ.ಸಿ ಗಂಗಾಧರ, ಉಪಾಧ್ಯಕ್ಷ ಬಿ. ಸುರೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೇಶ ಕಟ್ಟುವಲ್ಲಿ ಎಂಜಿನಿಯರ್ಗಳ ಪಾತ್ರ ಹಿರಿದಾಗಿದೆ. ರಾಜ್ಯವನ್ನು ಸಮೃದ್ದವನ್ನಾಗಿಸುವ, ಅಭಿವೃದ್ದಿಯ ಪಥದಲ್ಲಿ ಸಾಗುವಂತೆ ಮಾಡಿದ ಕೀರ್ತಿ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಸಲ್ಲುತ್ತದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹತ್ ತಿಳಿಸಿದರು.</p>.<p>ಜಲಮಂಡಳಿ ಅಭಿಯಂತರರ ಸಂಘದ ವತಿಯಿಂದ ಆಯೋಜಿಸಿದ್ದ ‘ಅಭಿಯಂತರರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದರು.</p>.<p>ಮೈಸೂರು ಮಹಾರಾಜರ ನಾಯಕತ್ವದಲ್ಲಿ ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಯೋಜನೆಗಳಿಂದಾಗಿ ರಾಜ್ಯ ಬಹಳಷ್ಟು ಕ್ಷೇತ್ರಗಳಲ್ಲಿ ಮೊದಲನೇ ಸ್ಥಾನದಲ್ಲಿದೆ. ಸರ್ ಎಂ.ವಿ ಅವರ ದೂರದೃಷ್ಟಿಯ ಪರಿಣಾಮದಿಂದಾಗಿ ಬೆಂಗಳೂರು ನಗರಕ್ಕೆ ಸಮರ್ಪಕ ನೀರು ಸರಬರಾಜು ಆಗುತ್ತಿದೆ ಎಂದು ಹೇಳಿದರು.</p>.<p>ಅಂತರ್ಜಲ ಕುಸಿತದಿಂದ ಬೇಸಿಗೆಯಲ್ಲಿ ಉಂಟಾಗಿದ್ದ ನೀರಿನ ಕೊರತೆಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಜಲಮಂಡಳಿ ಯಶಸ್ವಿಯಾಯಿತು ಎಂದರು.</p>.<p>ಇತಿಹಾಸಕಾರ ಧರ್ಮೇಂದ್ರ ಕುಮಾರ್ ಮಾತನಾಡಿ, ಸರ್ ಎಂವಿ ಅವರು ತಮ್ಮ ಕಾಲಾವಧಿಯಲ್ಲಿ ಹಲವಾರು ದೂರದೃಷ್ಟಿಯ ಕಾರ್ಯಗಳನ್ನು ಕೈಗೊಂಡು ಅನುಷ್ಠಾನಗೊಳಿಸಿದರು. ಬೆಂಗಳೂರು ನಗರ, ಮೈಸೂರು ರಾಜ್ಯ, ಕರ್ನಾಟಕ ರಾಜ್ಯ ಅಭಿವೃದ್ದಿಗೊಳ್ಳಲು ಸಮರ್ಥ ಯೋಜನೆಯನ್ನು ರೂಪಿಸಿದರು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದೆ ಸುಧಾ ಬರಗೂರು, ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘದ ಅಧ್ಯಕ್ಷ ಬಿ.ಸಿ ಗಂಗಾಧರ, ಉಪಾಧ್ಯಕ್ಷ ಬಿ. ಸುರೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>