<p><strong>ಬೆಂಗಳೂರು: </strong>ಪ್ರಸಿದ್ಧ ಜೋಗದ ಜಲಪಾತವನ್ನು ಸರ್ವಋತು ಜಲಪಾತವಾಗಿ ಅಭಿವೃದ್ಧಿಪಡಿಸುವ ಯೋಜನೆ ಮುಂದುವರಿಯಲಿದೆ ಎಂದು ಉದ್ಯಮಿ ಬಿ.ಆರ್. ಶೆಟ್ಟಿ ಹೇಳಿದರು.</p>.<p>ಇದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಅವರು ಸರ್ಕಾರಕ್ಕೆ ಮನವಿ ಮಾಡಿದರು.</p>.<p>ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಕೊಡಮಾಡಿದ ಸರ್ ಎಂ. ವಿಶ್ವೇಶ್ವರಾಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಕರ್ನಾಟಕ ಸೇರಿದಂತೆ ದೇಶದ ಮೂಲಸೌಲಭ್ಯ ಅಭಿವೃದ್ಧಿಗೆ ಅರಬ್ ಸಂಯುಕ್ತ ರಾಷ್ಟ್ರಗಳ ಹೂಡಿಕೆದಾರರನ್ನು ಕರೆತರಲು ಸಿದ್ಧವಿರುವುದಾಗಿ ಅವರು ಭರವಸೆ ನೀಡಿದರು.</p>.<p><strong>ಮನಸ್ಥಿತಿ ಬದಲಾಗಬೇಕು:</strong> ಪ್ರಮುಖ ಭಾಷಣ ಮಾಡಿದ ಸಂಸದ ಸುಬ್ರಮಣಿಯನ್ ಸ್ವಾಮಿ, ‘ಜನರ ಮನಸ್ಥಿತಿ ಬದಲಾಗದೆ ದೇಶದ ಪ್ರಗತಿ ಅಸಾಧ್ಯ. ನಾವು ಕೀಳರಿಮೆಯಿಂದ ಬಳಲುತ್ತಿದ್ದು, ಅದನ್ನು ತೊರೆಯಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಹೊಸ ಹೊಸ ಅನ್ವೇಷಣೆಗಳ ಮೂಲಕ ಬೇರೆ ರಾಷ್ಟ್ರಗಳಿಗೆ ಸರಿಸಮನಾಗಿ ನಿಲ್ಲಬೇಕು. ನೈಸರ್ಗಿಕವಾಗಿ ನಮಗಿರುವಷ್ಟು ಅನುಕೂಲ ಬೇರೆ ಯಾವ ರಾಷ್ಟ್ರಕ್ಕೂ ಇಲ್ಲ. ಇದನ್ನು ಅರ್ಥಮಾಡಿಕೊಳ್ಳಬೇಕು. ವಿಶ್ವೇಶ್ವರಾಯ ಅವರಂತೆ ದೂರದೃಷ್ಟಿಯಿಂದ ಕೆಲಸ ಮಾಡಿದರೆ ಏನು ಬೇಕಾದರೂ ಸಾಧಿಸಲು ಸಾಧ್ಯ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ಹಾಗೂ ತಮಿಳುನಾಡು ಕಾವೇರಿ ನೀರಿಗಾಗಿ ಗುದ್ದಾಡುತ್ತಿವೆ. ಆದರೆ, ಸಮುದ್ರದ ನೀರನ್ನು ಸಿಹಿಯಾಗಿ ಮಾರ್ಪಡಿಸಿ, ಬಳಸುವ ಆಲೋಚನೆ ಯಾರಿಗೂ ಇಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ಉದಾಹರಿಸಿದರು.</p>.<p>ನಿಷ್ಠೆ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿಸ್ವಾರ್ಥದಿಂದ ದುಡಿದರೆ ಸಮಾಜ ಬದಲಾವಣೆ ಆಗುವುದು ನಿಶ್ಚಿತ ಎಂದು ಕೇಂದ್ರ ಸಾಂಖ್ಯಿಕ ಹಾಗೂ ಕಾರ್ಯಕ್ರಮ ಅನುಷ್ಠಾನ ಇಲಾಖೆಯ ಸಚಿವ ಡಿ.ವಿ. ಸದಾನಂದಗೌಡ ನುಡಿದರು.</p>.<p>ವಾಣಿಜ್ಯಹಾಗೂ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಸುಧಾಕರ ಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪ್ರಸಿದ್ಧ ಜೋಗದ ಜಲಪಾತವನ್ನು ಸರ್ವಋತು ಜಲಪಾತವಾಗಿ ಅಭಿವೃದ್ಧಿಪಡಿಸುವ ಯೋಜನೆ ಮುಂದುವರಿಯಲಿದೆ ಎಂದು ಉದ್ಯಮಿ ಬಿ.ಆರ್. ಶೆಟ್ಟಿ ಹೇಳಿದರು.</p>.<p>ಇದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಅವರು ಸರ್ಕಾರಕ್ಕೆ ಮನವಿ ಮಾಡಿದರು.</p>.<p>ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಕೊಡಮಾಡಿದ ಸರ್ ಎಂ. ವಿಶ್ವೇಶ್ವರಾಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಕರ್ನಾಟಕ ಸೇರಿದಂತೆ ದೇಶದ ಮೂಲಸೌಲಭ್ಯ ಅಭಿವೃದ್ಧಿಗೆ ಅರಬ್ ಸಂಯುಕ್ತ ರಾಷ್ಟ್ರಗಳ ಹೂಡಿಕೆದಾರರನ್ನು ಕರೆತರಲು ಸಿದ್ಧವಿರುವುದಾಗಿ ಅವರು ಭರವಸೆ ನೀಡಿದರು.</p>.<p><strong>ಮನಸ್ಥಿತಿ ಬದಲಾಗಬೇಕು:</strong> ಪ್ರಮುಖ ಭಾಷಣ ಮಾಡಿದ ಸಂಸದ ಸುಬ್ರಮಣಿಯನ್ ಸ್ವಾಮಿ, ‘ಜನರ ಮನಸ್ಥಿತಿ ಬದಲಾಗದೆ ದೇಶದ ಪ್ರಗತಿ ಅಸಾಧ್ಯ. ನಾವು ಕೀಳರಿಮೆಯಿಂದ ಬಳಲುತ್ತಿದ್ದು, ಅದನ್ನು ತೊರೆಯಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಹೊಸ ಹೊಸ ಅನ್ವೇಷಣೆಗಳ ಮೂಲಕ ಬೇರೆ ರಾಷ್ಟ್ರಗಳಿಗೆ ಸರಿಸಮನಾಗಿ ನಿಲ್ಲಬೇಕು. ನೈಸರ್ಗಿಕವಾಗಿ ನಮಗಿರುವಷ್ಟು ಅನುಕೂಲ ಬೇರೆ ಯಾವ ರಾಷ್ಟ್ರಕ್ಕೂ ಇಲ್ಲ. ಇದನ್ನು ಅರ್ಥಮಾಡಿಕೊಳ್ಳಬೇಕು. ವಿಶ್ವೇಶ್ವರಾಯ ಅವರಂತೆ ದೂರದೃಷ್ಟಿಯಿಂದ ಕೆಲಸ ಮಾಡಿದರೆ ಏನು ಬೇಕಾದರೂ ಸಾಧಿಸಲು ಸಾಧ್ಯ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ಹಾಗೂ ತಮಿಳುನಾಡು ಕಾವೇರಿ ನೀರಿಗಾಗಿ ಗುದ್ದಾಡುತ್ತಿವೆ. ಆದರೆ, ಸಮುದ್ರದ ನೀರನ್ನು ಸಿಹಿಯಾಗಿ ಮಾರ್ಪಡಿಸಿ, ಬಳಸುವ ಆಲೋಚನೆ ಯಾರಿಗೂ ಇಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ಉದಾಹರಿಸಿದರು.</p>.<p>ನಿಷ್ಠೆ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿಸ್ವಾರ್ಥದಿಂದ ದುಡಿದರೆ ಸಮಾಜ ಬದಲಾವಣೆ ಆಗುವುದು ನಿಶ್ಚಿತ ಎಂದು ಕೇಂದ್ರ ಸಾಂಖ್ಯಿಕ ಹಾಗೂ ಕಾರ್ಯಕ್ರಮ ಅನುಷ್ಠಾನ ಇಲಾಖೆಯ ಸಚಿವ ಡಿ.ವಿ. ಸದಾನಂದಗೌಡ ನುಡಿದರು.</p>.<p>ವಾಣಿಜ್ಯಹಾಗೂ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಸುಧಾಕರ ಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>