‘ರಾಜ್ಯಕ್ಕೆ ವಾಪಸು ಬರಲು ಪ್ರಜ್ವಲ್ ಎರಡು ಬಾರಿ ವಿಮಾನ ಟಿಕೆಟ್ ಬುಕ್ಕಿಂಗ್ ಮಾಡಿದ್ದರು. ಆದರೆ, ಬಂಧನದ ಭೀತಿಯಿಂದಾಗಿ ಅವರು ಟಿಕೆಟ್ ರದ್ದುಪಡಿಸಿದ್ದರು. ಪ್ರಜ್ವಲ್ ವಿರುದ್ಧ ಈಗಾಗಲೇ ಬ್ಲೂಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಇಂಟರ್ಪೋಲ್ ಅಧಿಕಾರಿಗಳು ಪ್ರಜ್ವಲ್ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅದೇ ಮಾಹಿತಿ ಆಧರಿಸಿ ತನಿಖೆಯೂ ಮುಂದುವರಿದಿದೆ’ ಎಂದು ಎಸ್ಐಟಿ ಮೂಲಗಳು ಹೇಳಿವೆ.