ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭಾಗವಹಿಸುವ ಕೇಂದ್ರ ಸರ್ಕಾರದ ಜನಪ್ರತಿನಿಧಿಗಳಿಗೆ ಈ ಕೂಡಲೇ ಸಂವಿಧಾನದ 341(3)ನೇ ವಿಧಿಗೆ ತಿದ್ದುಪಡಿ ತರುವಂತೆ ಒತ್ತಾಯಿಸುವ ಹೋರಾಟ ರೂಪಿಸಲಾಗುವುದು. ಹೋರಾಟದಲ್ಲಿ ಮಾದಿಗ, ಚಲವಾದಿ ಸಮುದಾಯಗಳ ಸಂಘಟಕರು ತ್ರಿಮತಸ್ಥರು, ಅಲೆಮಾರಿಗಳು, ದಕ್ಕಲಿಗರು ಇನ್ನುಳಿದ ಜಾತಿಗಳನ್ನು ಒಂದು
ಗೂಡಿಸುವ ಹೋರಾಟ ಮುಂದುವರಿಸಲಾಗುವುದು ಎಂಬ ನಿರ್ಣಯವನ್ನು ಹೋರಾಟಗಾರರು ಕೈಗೊಂಡರು.