ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಎಸ್. ಭಾಗವತ್, ‘ಹೈಕೋರ್ಟ್ ಆದೇಶದಂತೆ, 91 ಉತ್ತರ ಪತ್ರಿಕೆಗಳ ಮೂರನೇ ಮೌಲ್ಯಮಾಪನದ ಅಂಕ ಪರಿಗಣಿಸಬೇಕಿತ್ತು, ಆದರೆ, ಕೆಪಿಎಸ್ಸಿ 91 ಅಭ್ಯರ್ಥಿಗಳ ಅಂಕಗಳನ್ನು ಪರಿಗಣಿಸಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು. ಅಲ್ಲದೆ, ‘ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ, ಪಟ್ಟಿ ಪರಿಷ್ಕರಣೆಯಿಂದ ಯಾವುದೇ ರೀತಿಯ ತೊಂದರೆಯಾದಲ್ಲಿ ಅಭ್ಯರ್ಥಿ ಕೆಎಟಿಯಲ್ಲಿ ಪ್ರಶ್ನಿಸಿ ಪರಿಹಾರ ಕಂಡುಕೊಳ್ಳಬಹುದು ಎಂದಿದೆ. ಆದ್ದರಿಂದ, ಕೆಪಿಎಸ್ಸಿ ಹೊರಡಿಸಿರುವ ಪರಿಷ್ಕೃತ ಆಯ್ಕೆ ಪಟ್ಟಿಗಳನ್ನು ರದ್ದುಗೊಳಿಸಬೇಕು. ಜೊತೆಗೆ, ಅರ್ಜಿದಾರರ ಅದೇ ಹುದ್ದೆಯಲ್ಲಿ ಮುಂದುವರೆಸಲು ಸರ್ಕಾರಕ್ಕೆ ಸೂಚನೆ ನೀಡಬೇಕು’ ಎಂದು ಕೋರಿದ್ದರು.