ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಲಿಗೆ ಮಾಡಿದ್ದ ಹಣದಲ್ಲಿ ಪಾಲು ಪಡೆದಿದ್ದ ಇನ್‌ಸ್ಪೆಕ್ಟರ್ ಅಮಾನತು

Last Updated 13 ಸೆಪ್ಟೆಂಬರ್ 2020, 7:44 IST
ಅಕ್ಷರ ಗಾತ್ರ

ಬೆಂಗಳೂರು: ದರೋಡೆ ಪ್ರಕರಣದ ಆರೋಪಿ ಎಸ್.ಜೆ.ಪಾರ್ಕ್ ಠಾಣೆಯ ಪಿಎಸ್ಐ ಜೀವನ್ ಕುಮಾರ್ ಅವರಿಂದ ಹಣ ಪಡೆದ ಆರೋಪದಡಿ ಠಾಣೆಯ ಇನ್‌ಸ್ಪೆಕ್ಟರ್ ಯೋಗೇಶ್‌ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಸಿಟಿ ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸುಲಿಗೆ ಪ್ರಕರಣದಲ್ಲಿ ಜೀವನ್‌ಕುಮಾರ್ ಹಾಗೂ ಆತನ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದರು.

ಪ್ರಕರಣದ ವಿಚಾರಣೆ ವೇಳೆ, ಇನ್‌ಸ್ಪೆಕ್ಟರ್ ಯೋಗೇಶ್ ಕುಮಾರ್ ಅವರೂ ಸುಲಿಗೆ ಮಾಡಿದ್ದ ಹಣದಲ್ಲಿ ಪಾಲು ಪಡೆದಿದ್ದ ಸಂಗತಿ ಬಯಲಾಗಿತ್ತು‌. ಇನ್‌ಸ್ಪೆಕ್ಟರ್ ಅಮಾನತು ಮಾಡುವಂತೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಕುಮಾರ್ ಅವರು ಹಾಗು ಹೆಚ್ಚುವರಿ ಪೊಲೀಸ್ ಕಮಿಷನರ್ ಅವರಿಗೆ ವರದಿ ಸಲ್ಲಿಸಿದ್ದರು.

ವರದಿಯನ್ವಯ ಈಗ ಇನ್‌ಸ್ಪೆಕ್ಟರ್ ಅವರನ್ನು ಅಮಾನತು ಮಾಡಿ ಹೆಚ್ಚುವರಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT