‘ದೇಶದಾದ್ಯಂತ 300 ಕ್ಕೂ ಹೆಚ್ಚು ಶಾಲೆಗಳಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ವಿಷಯ ತಜ್ಞರ ಜತೆ ಮಾತುಕತೆ, ಸಂವಾದ, ಉಪನ್ಯಾಸ, ವಿಚಾರ ಗೋಷ್ಠಿಗಳು ಪ್ರತ್ಯೇಕವಾಗಿ ನಡೆಯಲಿವೆ. ‘ಇಂತಹ ಕಾರ್ಯಾಗಾರಗಳು ದೇಶದಾದ್ಯಂತ ವಿವಿಧ ಭಾಗಗಳಲ್ಲಿ ನಡೆಯಲಿದ್ದು ಸುಮಾರು ಮೂರು ಕೋಟಿ ವಿದ್ಯಾರ್ಥಿಗಳನ್ನು ತಲುಪುವ ಗುರಿ ಹೊಂದಲಾಗಿದೆ’ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಕುಮಾರ್ ಹೇಳಿದರು.