<p><strong>ಬೆಂಗಳೂರು</strong>: ‘ಎಲ್ಲ ಕೆಲಸಗಳನ್ನೂ ಸರ್ಕಾರವೇ ಮಾಡುವುದು ಕಷ್ಟ. ಖಾಸಗಿಯವರ ಯಶಸ್ವಿ ಕೈಗಾರಿಕಾ ಮಾದರಿಗಳಿಂದ ಸರ್ಕಾರವೂ ಕಲಿಯಬಹುದಾಗಿದೆ’ ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.</p><p>ಪಿಇಎಸ್ ವಿಶ್ವವಿದ್ಯಾಲಯದಲ್ಲಿ ನಡೆದ ಬಜಾಜ್ ಎಂಜಿನಿಯರಿಂಗ್ ಕೌಶಲ ತರಬೇತಿ (ಬೆಸ್ಟ್) ಕೇಂದ್ರದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಬೆಸ್ಟ್’ ಕೇಂದ್ರವು, ಬಜಾಜ್ ಆಟೊ ಲಿಮಿಟೆಡ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ(ಸಿಎಸ್ಆರ್) ಉಪಕ್ರಮವಾಗಿದೆ.</p><p>‘ಬಜಾಜ್ ಆಟೊ ಮತ್ತು ಪಿಇಎಸ್ ವಿಶ್ವವಿದ್ಯಾಲಯದ ನಡುವಿನ ಈ ಸಹಯೋಗವು ಸಾರ್ವಜನಿಕ-ಖಾಸಗಿ ಸಹಭಾಗಿತ್ವಕ್ಕೆ ಉತ್ತಮ ಉದಾಹರಣೆಯಾಗಿದೆ. ಕೌಶಲಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲು ಹಾಗೂ ಯುವ ಜನರನ್ನು ಸಬಲೀಕರಣಗೊಳಿಸಲು ಇಂಥ ಸಹಯೋಗದ ಪ್ರಯತ್ನಗಳಿಗೆ ಆದ್ಯತೆ ನೀಡಲಾಗುವುದು’ ಎಂದು ಭರವಸೆ ನೀಡಿದರು.</p><p>‘ಇಂಥ ಯೋಜನೆಗಳು ವಿಶೇಷವಾಗಿ ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದ ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನಕಾರಿ. ಆ ಭಾಗದ ಜಿಲ್ಲೆಗಳ ಯುವಜನರನ್ನು ಉನ್ನತೀಕರಿಸುವ ಮಾದರಿಯಾಗಿದೆ’ ಎಂದರು.<br><br> ‘ಕೌಶಲ ಅಭಿವೃದ್ಧಿ ಮತ್ತು ಉದ್ಯೋಗದ ಗುರಿಗಳನ್ನು ಸಾಧಿಸಲು ಬಲವಾದ ಸರ್ಕಾರಿ-ಶೈಕ್ಷಣಿಕ-ಉದ್ಯಮ ಪಾಲುದಾರಿಕೆಯನ್ನು ಸರ್ಕಾರ ಇನ್ನಷ್ಟು ಅನ್ವೇಷಿಸಬೇಕಾಗಿದೆ’ ಎಂದು ಸಚಿವರು ಅಭಿಪ್ರಾಯಪಟ್ಟರು.</p><p>ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ. ಡಿ. ಜವಾಹರ್, ಕುಲಪತಿ ಜೆ. ಸೂರ್ಯ ಪ್ರಸಾದ್ ಮತ್ತು ಬಜಾಜ್ ಆಟೊ ಲಿಮಿಟೆಡ್ನ ಸಿಎಸ್ಆರ್ ಉಪಾಧ್ಯಕ್ಷ ಸುಧಾಕರ್ ಗುಡಿಪತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<p><strong>320 ವಿದ್ಯಾರ್ಥಿಗಳಿಗೆ ತರಬೇತಿ</strong> </p><p>‘ಬೆಸ್ಟ್’ ಕೇಂದ್ರವು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮೆಕೆಟ್ರಾನಿಕ್ಸ್ ರೊಬೊಟಿಕ್ಸ್ ಇಂಡಸ್ಟ್ರಿ 4.0 ಮತ್ತು ಸ್ಮಾರ್ಟ್ ಮ್ಯಾನುಫ್ಯಾಕ್ಚರಿಂಗ್ನಂತಹ ಸಮಕಾಲೀನ ತಂತ್ರಜ್ಞಾನಗಳಲ್ಲಿ ಸುಧಾರಿತ ತರಬೇತಿ ನೀಡುತ್ತಿದೆ. ಮೊದಲ ವರ್ಷದಲ್ಲಿ 320 ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದು ಅವರೆಲ್ಲರೂ ಉತ್ತಮ ವೇತನದೊಂದಿಗೆ ಉದ್ಯೋಗದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಎಲ್ಲ ಕೆಲಸಗಳನ್ನೂ ಸರ್ಕಾರವೇ ಮಾಡುವುದು ಕಷ್ಟ. ಖಾಸಗಿಯವರ ಯಶಸ್ವಿ ಕೈಗಾರಿಕಾ ಮಾದರಿಗಳಿಂದ ಸರ್ಕಾರವೂ ಕಲಿಯಬಹುದಾಗಿದೆ’ ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.</p><p>ಪಿಇಎಸ್ ವಿಶ್ವವಿದ್ಯಾಲಯದಲ್ಲಿ ನಡೆದ ಬಜಾಜ್ ಎಂಜಿನಿಯರಿಂಗ್ ಕೌಶಲ ತರಬೇತಿ (ಬೆಸ್ಟ್) ಕೇಂದ್ರದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಬೆಸ್ಟ್’ ಕೇಂದ್ರವು, ಬಜಾಜ್ ಆಟೊ ಲಿಮಿಟೆಡ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ(ಸಿಎಸ್ಆರ್) ಉಪಕ್ರಮವಾಗಿದೆ.</p><p>‘ಬಜಾಜ್ ಆಟೊ ಮತ್ತು ಪಿಇಎಸ್ ವಿಶ್ವವಿದ್ಯಾಲಯದ ನಡುವಿನ ಈ ಸಹಯೋಗವು ಸಾರ್ವಜನಿಕ-ಖಾಸಗಿ ಸಹಭಾಗಿತ್ವಕ್ಕೆ ಉತ್ತಮ ಉದಾಹರಣೆಯಾಗಿದೆ. ಕೌಶಲಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲು ಹಾಗೂ ಯುವ ಜನರನ್ನು ಸಬಲೀಕರಣಗೊಳಿಸಲು ಇಂಥ ಸಹಯೋಗದ ಪ್ರಯತ್ನಗಳಿಗೆ ಆದ್ಯತೆ ನೀಡಲಾಗುವುದು’ ಎಂದು ಭರವಸೆ ನೀಡಿದರು.</p><p>‘ಇಂಥ ಯೋಜನೆಗಳು ವಿಶೇಷವಾಗಿ ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದ ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನಕಾರಿ. ಆ ಭಾಗದ ಜಿಲ್ಲೆಗಳ ಯುವಜನರನ್ನು ಉನ್ನತೀಕರಿಸುವ ಮಾದರಿಯಾಗಿದೆ’ ಎಂದರು.<br><br> ‘ಕೌಶಲ ಅಭಿವೃದ್ಧಿ ಮತ್ತು ಉದ್ಯೋಗದ ಗುರಿಗಳನ್ನು ಸಾಧಿಸಲು ಬಲವಾದ ಸರ್ಕಾರಿ-ಶೈಕ್ಷಣಿಕ-ಉದ್ಯಮ ಪಾಲುದಾರಿಕೆಯನ್ನು ಸರ್ಕಾರ ಇನ್ನಷ್ಟು ಅನ್ವೇಷಿಸಬೇಕಾಗಿದೆ’ ಎಂದು ಸಚಿವರು ಅಭಿಪ್ರಾಯಪಟ್ಟರು.</p><p>ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ. ಡಿ. ಜವಾಹರ್, ಕುಲಪತಿ ಜೆ. ಸೂರ್ಯ ಪ್ರಸಾದ್ ಮತ್ತು ಬಜಾಜ್ ಆಟೊ ಲಿಮಿಟೆಡ್ನ ಸಿಎಸ್ಆರ್ ಉಪಾಧ್ಯಕ್ಷ ಸುಧಾಕರ್ ಗುಡಿಪತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<p><strong>320 ವಿದ್ಯಾರ್ಥಿಗಳಿಗೆ ತರಬೇತಿ</strong> </p><p>‘ಬೆಸ್ಟ್’ ಕೇಂದ್ರವು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮೆಕೆಟ್ರಾನಿಕ್ಸ್ ರೊಬೊಟಿಕ್ಸ್ ಇಂಡಸ್ಟ್ರಿ 4.0 ಮತ್ತು ಸ್ಮಾರ್ಟ್ ಮ್ಯಾನುಫ್ಯಾಕ್ಚರಿಂಗ್ನಂತಹ ಸಮಕಾಲೀನ ತಂತ್ರಜ್ಞಾನಗಳಲ್ಲಿ ಸುಧಾರಿತ ತರಬೇತಿ ನೀಡುತ್ತಿದೆ. ಮೊದಲ ವರ್ಷದಲ್ಲಿ 320 ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದು ಅವರೆಲ್ಲರೂ ಉತ್ತಮ ವೇತನದೊಂದಿಗೆ ಉದ್ಯೋಗದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>