ಎನ್ಎಬಿಎಚ್ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ಡಾ. ಅತುಲ್ ಕೊಚ್ಚರ್, ‘ದೇಶದಲ್ಲಿ ಆರೋಗ್ಯ ಕ್ಷೇತ್ರವು ವೇಗವಾಗಿ ಬೆಳವಣಿಗೆ ಹೊಂದುತ್ತಿದೆ. ಕಾಲಕಾಲಕ್ಕೆ ಆರೋಗ್ಯ ಕಾರ್ಯಕರ್ತರ ಕೌಶಲವನ್ನು ಹೆಚ್ಚಿಸಬೇಕು. ಹೀಗಾಗಿ, ಕೌಶಲ ವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ವೈದ್ಯರು, ಆರೋಗ್ಯ ಸಿಬ್ಬಂದಿ ಹಾಗೂ ರೋಗಿಗಳ ನಡುವಿನ ಕಂದಕ ನಿವಾರಿಸಲಾಗುವುದು’ ಎಂದು ತಿಳಿಸಿದರು.