ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರ್ಮರೋಗ ಚಿಕಿತ್ಸಾಲಯಕ್ಕೆ ಚಾಲನೆ

Last Updated 16 ಆಗಸ್ಟ್ 2022, 14:26 IST
ಅಕ್ಷರ ಗಾತ್ರ

ಬೆಂಗಳೂರು: ಚರ್ಮರೋಗ ಸಮಸ್ಯೆಗಳಿಗೆ ಸಂಬಂಧಿಸಿದಂತೆಒಂದೇ ಕಡೆ ಚಿಕಿತ್ಸೆ ನೀಡುವ ‘ಎಪಿಕೋರಿಯಮ್’ ಚಿಕಿತ್ಸಾಲಯಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಚಾಲನೆ ನೀಡಿದರು.

ಚರ್ಮರೋಗ ತಜ್ಞಡಾ. ಬಿ.ಎಸ್. ಚಂದ್ರಶೇಖರ್ ಮತ್ತು ಉದ್ಯಮಿ ಇಲೇಶ್ ಖಬ್ಬರ್ ಈ ಚಿಕಿತ್ಸಾಲಯವನ್ನು ನಗರದ ಎಚ್‌.ಎಸ್.ಆರ್. ಬಡಾವಣೆಯಲ್ಲಿ ಪ್ರಾರಂಭಿಸಿದ್ದಾರೆ.

‘ವಾತಾವರಣದಲ್ಲಿ ಬದಲಾವಣೆ ಸೇರಿ ವಿವಿಧ ಕಾರಣಗಳಿಂದ ಚರ್ಮರೋಗ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತಿವೆ. ದೂಳು ಮತ್ತು ಶುಷ್ಕತೆಯಿಂದ ಚರ್ಮದ ಅಲರ್ಜಿ ಕಾಣಿಸಿಕೊಳ್ಳುತ್ತಿದೆ.ಚರ್ಮರೋಗಗಳನ್ನು ಕಡೆಗಣಿಸಬಾರದು. ಚರ್ಮ ಸಂಬಂಧಿ ಸಮಸ್ಯೆಗಳಿಗೆ ಒಂದೇ ಕಡೆ ಚಿಕಿತ್ಸೆ ದೊರೆಯುವುದರಿಂದ ಜನರು ಆಸ್ಪತ್ರೆಗಳಿಗೆ ಅಲೆದಾಡುವುದು ತಪ್ಪಲಿದೆ’ ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

‘ಈ ಕೇಂದ್ರದಲ್ಲಿ ಮೊಡವೆ, ಸೋರಿಯಾಸಿಸ್, ಶಿಲೀಂಧ್ರ ಸೋಂಕು, ಚರ್ಮದ ಅಲರ್ಜಿ, ಕೂದಲು ಸಂಬಂಧಿ ಸಮಸ್ಯೆ ಸೇರಿ ವಿವಿಧ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲಾಗಿದೆ’ ಎಂದು ಡಾ. ಬಿ.ಎಸ್. ಚಂದ್ರಶೇಖರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT