ಚಾಟಿ: ಸಂಚಾರ ದಟ್ಟಣೆ ಇರುವುದರಿಂದ ಪಾದಚಾರಿಗಳು ರಸ್ತೆ ದಾಟಲು ಹರಸಾಹಸ ಪಡಬೇಕಿತ್ತು. ಇದನ್ನು ಪರಿಗಣಿಸಿಯೇ ಬಿಬಿಎಂಪಿ, ಸ್ಯಾಟಲೈಟ್ ಬಸ್ ನಿಲ್ದಾಣದಿಂದ ರಮಣಿ ಟಿಂಬರ್ ಮಾರ್ಕ್ವರೆಗೆ ಮತ್ತು ಗಾಳಿ ಆಂಜನೇಯ ದೇವಸ್ಥಾನದ ಬಳಿ ಎರಡು ಪ್ರತ್ಯೇಕ ಸ್ಕೈ–ವಾಕ್ ನಿರ್ಮಿಸಲು 2017ರಲ್ಲಿ ಗುತ್ತಿಗೆ ನೀಡಿತ್ತು. ಸ್ಯಾಟಲೈಟ್ ಬಸ್ ನಿಲ್ದಾಣ-ರಮಣಿ ಟಿಂಬರ್ ಮಾರ್ಕ್ ಸ್ಕೈ–ವಾಕ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕೆಎಸ್ಆರ್ಟಿಸಿ ಮತ್ತು ಸಂಚಾರ ವಿಭಾಗದ ಪೊಲೀಸರು, ಬಿಎಂಟಿಸಿ ಸಬ್ ವೇ ಪ್ರವೇಶದ್ವಾರದ ಬಳಿ ಸ್ಕೈ–ವಾಕ್ ಅಳವಡಿಕೆಗೆ 2018ರ ಸೆಪ್ಟೆಂಬರ್ನಲ್ಲಿ ಅನುಮತಿ ನೀಡಿದ್ದವು. ಅದಕ್ಕೆ ಬಿಬಿಬಿಎಂಪಿ ನಿರಾಕ್ಷೇಪಣಾ ಪತ್ರವನ್ನೂ ನೀಡಿತ್ತು.