ಜುಲೈ 9ರಂದು ಸಿಎಆರ್ (ನಗರ ಸಶಸ್ತ್ರ ಮೀಸಲು) ಡಿಸಿಪಿ ಗಸ್ತಿನಲ್ಲಿದ್ದ ವೇಳೆ ಠಾಣೆಗೆ ದಿಢೀರ್ ಭೇಟಿ ನೀಡಿದ್ದರು. ಆಗ ಇಬ್ಬರೂ ನಿದ್ರಿಸುತ್ತಿರುವುದು ಕಂಡುಬಂದಿದೆ. ಠಾಣೆಯಲ್ಲಿ ಸೆಂಟ್ರಿ ಕೆಲಸ ಮಾಡುತ್ತಿದ್ದವರನ್ನು ವಿಚಾರಣೆ ನಡೆಸಿದ್ದರು. ಅವರಿಂದಲೂ ಸಮರ್ಪಕ ಉತ್ತರ ದೊರೆತಿರಲಿಲ್ಲ. ನಿರ್ಲಕ್ಷ್ಯತನ ತೋರಿದ ಆರೋಪದ ಅಡಿ ಇಬ್ಬರೂ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.