ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಕ್ಲಿಫ್ಟನ್ ರೊಜಾರಿಯೊ, ‘ಕೊಳಗೇರಿಗಳು ವಾಸ ಮಾಡುತ್ತಿರುವ ಜಾಗವನ್ನು ಕೆರೆ ಪ್ರದೇಶ ಎಂದು ತೆರವುಗೊಳಿಸಲು ಸರ್ಕಾರ ಮುಂದಾಗಿದೆ. ಇದೇ 21ಕ್ಕೆ ಸಂಪೂರ್ಣ ಪ್ರದೇಶವನ್ನು ತೆರವುಗೊಳಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದ್ದರಿಂದ ತೆರವು ಕಾರ್ಯಾಚರಣೆಗೆ ತಡೆ ನೀಡಬೇಕು’ ಎಂದು ಮನವಿ ಮಾಡಿದರು.