ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಮಾತನಾಡಿ, ‘ನಗರಗಳ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಮೂಲಸೌಕರ್ಯ ಕಲ್ಪಿಸುವುದು ದೊಡ್ಡ ಸವಾಲಿನ ಕೆಲಸವಾಗಿದೆ. ನೀರು, ವಿದ್ಯುತ್, ರಸ್ತೆ, ಒಳಚರಂಡಿ, ವಸತಿ ಕಲ್ಪಿಸುವುದರ ಜತೆಗೆ ಉತ್ತಮ ಶಿಕ್ಷಣ ಸಿಗುವಂತೆಮಾಡಿ, ನಿರುದ್ಯೋಗ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಬೇಕಿದೆ. ಬಡತನದಿಂದ ಮೇಲೆ ತರುವ ಪ್ರಯತ್ನ ನಡೆಸಬೇಕಾಗಿದೆ’ ಎಂದು ಅಭಿಪ್ರಾಯಪಟ್ಟರು.