<p><strong>ಬೆಂಗಳೂರು</strong>: ಸ್ಮಾರ್ಟ್ಸಿಟಿ ಯೋಜನೆಯಡಿಕಬ್ಬನ್ ಉದ್ಯಾನದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಕಾಮಗಾರಿಗಳನ್ನು ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸಬೇಕು ಎಂದು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ಅಧ್ಯಕ್ಷ ರಾಕೇಶ್ ಸಿಂಗ್ ಗಡುವು ವಿಧಿಸಿದರು.</p>.<p>ಬೆಂಗಳೂರು ಸ್ಮಾರ್ಟ್ಸಿಟಿ ಸಂಸ್ಥೆಯು ಕಬ್ಬನ್ ಉದ್ಯಾನದ ಅಭಿವೃದ್ಧಿಗಾಗಿ ಕೈಗೊಂಡ ವಿವಿಧ ಕಾಮಗಾರಿಗಳನ್ನು ಅವರು ಬುಧವಾರ ಪರಿಶೀಲಿಸಿದರು.</p>.<p>ಉದ್ಯಾನದಲ್ಲಿರುವ ಬಾಲಭವನ ಆವರಣದಲ್ಲೂ ಸ್ಮಾರ್ಟ್ಸಿಟಿ ಯೋಜನೆಯಡಿ ಬೋಟಿಂಗ್ ಕೊಳ, ಇಲ್ಲಿನ ಬಯಲು ರಂಗಮಂದಿರದ ಪುನರ್ನಿರ್ಮಾಣ, ವಿಜ್ಞಾನ ಪಾರ್ಕ್ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>‘ಶಾಲಾ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಯೋಜನೆ ರೂಪಿಸಿ ಹಾಗೂ ವೈಜ್ಞಾನಿಕ ಅಂಶಗಳನ್ನು ಅಳವಡಿಸಿಕೊಂಡು ಕಾಮಗಾರಿಗಳನ್ನು ನಡೆಸಬೇಕು’ ಎಂದು ಗುತ್ತಿಗೆದಾರರಿಗೆ ರಾಕೇಶ್ ಸಿಂಗ್ ಸೂಚಿಸಿದರು.</p>.<p>ಬಾಲಭವನ ಸೊಸೈಟಿ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ್, ಸ್ಮಾರ್ಟ್ಸಿಟಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಚೋಳನ್, ಮುಖ್ಯ ಎಂಜಿನಿಯರ್ ವಿನಾಯಕ ಸುಗೂರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಬಾಲಕೃಷ್ಣ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸ್ಮಾರ್ಟ್ಸಿಟಿ ಯೋಜನೆಯಡಿಕಬ್ಬನ್ ಉದ್ಯಾನದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಕಾಮಗಾರಿಗಳನ್ನು ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸಬೇಕು ಎಂದು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ಅಧ್ಯಕ್ಷ ರಾಕೇಶ್ ಸಿಂಗ್ ಗಡುವು ವಿಧಿಸಿದರು.</p>.<p>ಬೆಂಗಳೂರು ಸ್ಮಾರ್ಟ್ಸಿಟಿ ಸಂಸ್ಥೆಯು ಕಬ್ಬನ್ ಉದ್ಯಾನದ ಅಭಿವೃದ್ಧಿಗಾಗಿ ಕೈಗೊಂಡ ವಿವಿಧ ಕಾಮಗಾರಿಗಳನ್ನು ಅವರು ಬುಧವಾರ ಪರಿಶೀಲಿಸಿದರು.</p>.<p>ಉದ್ಯಾನದಲ್ಲಿರುವ ಬಾಲಭವನ ಆವರಣದಲ್ಲೂ ಸ್ಮಾರ್ಟ್ಸಿಟಿ ಯೋಜನೆಯಡಿ ಬೋಟಿಂಗ್ ಕೊಳ, ಇಲ್ಲಿನ ಬಯಲು ರಂಗಮಂದಿರದ ಪುನರ್ನಿರ್ಮಾಣ, ವಿಜ್ಞಾನ ಪಾರ್ಕ್ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>‘ಶಾಲಾ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಯೋಜನೆ ರೂಪಿಸಿ ಹಾಗೂ ವೈಜ್ಞಾನಿಕ ಅಂಶಗಳನ್ನು ಅಳವಡಿಸಿಕೊಂಡು ಕಾಮಗಾರಿಗಳನ್ನು ನಡೆಸಬೇಕು’ ಎಂದು ಗುತ್ತಿಗೆದಾರರಿಗೆ ರಾಕೇಶ್ ಸಿಂಗ್ ಸೂಚಿಸಿದರು.</p>.<p>ಬಾಲಭವನ ಸೊಸೈಟಿ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ್, ಸ್ಮಾರ್ಟ್ಸಿಟಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಚೋಳನ್, ಮುಖ್ಯ ಎಂಜಿನಿಯರ್ ವಿನಾಯಕ ಸುಗೂರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಬಾಲಕೃಷ್ಣ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>