<p><strong>ಬೆಂಗಳೂರು</strong>: ‘ಸ್ನೇಹದೀಪ ಅಂಗವಿಕಲರ ಸಂಸ್ಥೆ’ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಸಾಂಸ್ಕೃತಿಕ ಸಮಾವೇಶದಲ್ಲಿ ಅಂಗವಿಕಲ ಮಕ್ಕಳ ಗಾಯನ ಹಾಗೂ ನೃತ್ಯ ಮನಸೆಳೆಯಿತು. ಗಾಯನಕ್ಕೆ ಪ್ರೇಕ್ಷಕರು ಮನಸೋತರು. ದಿನವಿಡೀ ಸಾಂಸ್ಕೃತಿಕ ಕಲರವ ಕೇಳಿಬಂತು.</p>.<p>ಮಲ್ಲೇಶ್ವರದ ಜಲಮಂಡಳಿಯ ರಜತಭವನದಲ್ಲಿ ನಡೆದ ಸಮಾವೇಶದಲ್ಲಿ ವಿವಿಧೆಡೆಯಿಂದ 400ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದರು.</p>.<p>ಸಮಾವೇಶಕ್ಕೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಚಾಲನೆ ನೀಡಿದರು.</p>.<p>ಬಳಿಕ ಅವರು ಮಾತನಾಡಿ, ‘ಈ ರೀತಿಯ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಇವರು ಅಂಗವಿಕಲ ಮಕ್ಕಳು ಅಲ್ಲ; ವಿಶೇಷಚೇತನರು. ಎಲ್ಲರಿಗೂ ವಿಶೇಷ ಶಕ್ತಿ ಇರುತ್ತದೆ. ಎಲ್ಲ ರಂಗದಲ್ಲೂ ಅಂಗವಿಕಲರಿಗೆ ಸ್ಥಾನ ಸಿಗಬೇಕು’ ಎಂದು ಸಲಹೆ ನೀಡಿದರು.</p>.<p>‘ಅಂಗವಿಕಲರು ಸ್ವಾವಲಂಬಿಯಾಗಿ ಬದುಕು ನಡೆಸಬೇಕಿದ್ದು, ಸರ್ಕಾರವು ಉತ್ತಮ ಯೋಜನೆ ಜಾರಿಗೊಳಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>‘ಸಮಾಜಮುಖಿಯಾಗಿ ಬದುಕು ನಡೆಸಲು ಸ್ನೇಹದೀಪ ಸಂಸ್ಥೆಯು ವೇದಿಕೆ ಕಲ್ಪಿಸಿಕೊಟ್ಟಿದೆ’ ಎಂದು ಹೇಳಿದರು.</p>.<p>ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಧರ್ಮದರ್ಶಿ ಡಾ.ಪಾಲ್ ಮುದ್ದಾ ಮಾತನಾಡಿ, ‘ಈ ವರ್ಷ ನಿರಂತರ ಕಾರ್ಯಕ್ರಮ ನಡೆಸುತ್ತಾ ಬರುತ್ತಿದ್ದೇವೆ. ಪ್ರತಿಭಾನ್ವಿತರಿಗೆ ವೇದಿಕೆ ಕಲ್ಪಿಸುತ್ತಿದ್ದೇವೆ.<br />ಶಮಾನೋತ್ಸವ ಸಮಾರಂಭವು ತುಂಬ ಖುಷಿ ನೀಡಿದೆ’ ಎಂದರು.</p>.<p>ಸಂಸ್ಥೆಯ ಧರ್ಮದರ್ಶಿ ಕೆ.ಜಿ.ಮೋಹನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸ್ನೇಹದೀಪ ಅಂಗವಿಕಲರ ಸಂಸ್ಥೆ’ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಸಾಂಸ್ಕೃತಿಕ ಸಮಾವೇಶದಲ್ಲಿ ಅಂಗವಿಕಲ ಮಕ್ಕಳ ಗಾಯನ ಹಾಗೂ ನೃತ್ಯ ಮನಸೆಳೆಯಿತು. ಗಾಯನಕ್ಕೆ ಪ್ರೇಕ್ಷಕರು ಮನಸೋತರು. ದಿನವಿಡೀ ಸಾಂಸ್ಕೃತಿಕ ಕಲರವ ಕೇಳಿಬಂತು.</p>.<p>ಮಲ್ಲೇಶ್ವರದ ಜಲಮಂಡಳಿಯ ರಜತಭವನದಲ್ಲಿ ನಡೆದ ಸಮಾವೇಶದಲ್ಲಿ ವಿವಿಧೆಡೆಯಿಂದ 400ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದರು.</p>.<p>ಸಮಾವೇಶಕ್ಕೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಚಾಲನೆ ನೀಡಿದರು.</p>.<p>ಬಳಿಕ ಅವರು ಮಾತನಾಡಿ, ‘ಈ ರೀತಿಯ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಇವರು ಅಂಗವಿಕಲ ಮಕ್ಕಳು ಅಲ್ಲ; ವಿಶೇಷಚೇತನರು. ಎಲ್ಲರಿಗೂ ವಿಶೇಷ ಶಕ್ತಿ ಇರುತ್ತದೆ. ಎಲ್ಲ ರಂಗದಲ್ಲೂ ಅಂಗವಿಕಲರಿಗೆ ಸ್ಥಾನ ಸಿಗಬೇಕು’ ಎಂದು ಸಲಹೆ ನೀಡಿದರು.</p>.<p>‘ಅಂಗವಿಕಲರು ಸ್ವಾವಲಂಬಿಯಾಗಿ ಬದುಕು ನಡೆಸಬೇಕಿದ್ದು, ಸರ್ಕಾರವು ಉತ್ತಮ ಯೋಜನೆ ಜಾರಿಗೊಳಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>‘ಸಮಾಜಮುಖಿಯಾಗಿ ಬದುಕು ನಡೆಸಲು ಸ್ನೇಹದೀಪ ಸಂಸ್ಥೆಯು ವೇದಿಕೆ ಕಲ್ಪಿಸಿಕೊಟ್ಟಿದೆ’ ಎಂದು ಹೇಳಿದರು.</p>.<p>ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಧರ್ಮದರ್ಶಿ ಡಾ.ಪಾಲ್ ಮುದ್ದಾ ಮಾತನಾಡಿ, ‘ಈ ವರ್ಷ ನಿರಂತರ ಕಾರ್ಯಕ್ರಮ ನಡೆಸುತ್ತಾ ಬರುತ್ತಿದ್ದೇವೆ. ಪ್ರತಿಭಾನ್ವಿತರಿಗೆ ವೇದಿಕೆ ಕಲ್ಪಿಸುತ್ತಿದ್ದೇವೆ.<br />ಶಮಾನೋತ್ಸವ ಸಮಾರಂಭವು ತುಂಬ ಖುಷಿ ನೀಡಿದೆ’ ಎಂದರು.</p>.<p>ಸಂಸ್ಥೆಯ ಧರ್ಮದರ್ಶಿ ಕೆ.ಜಿ.ಮೋಹನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>