ಹೋರಾಟಗಾರ ಲಕ್ಷ್ಮೀಶ ಗಬ್ಬಲಡ್ಕ ಮಾತನಾಡಿ, ‘ನಮ್ಮೊಳಗಿನ ಬೆಂಕಿ ಕಡಿಮೆಯಾಗಿ ತಂಪು ಬಂದ ಕಾರಣ ನಾವು ಆರ್ಎಸ್ಎಸ್ನಿಂದ ಹೊರಗೆ ಬಂದಿದ್ದೇವೆ. ಆರ್ಎಸ್ಎಸ್ನಲ್ಲಿ ಆಟ, ಹಾಡು, ಚಾರಣ, ಬೆಳದಿಂಗಳ ಊಟ, ಕಥೆ ಹೆಸರಿನಲ್ಲಿ ಒಟ್ಟು ಸೇರಿಸಿ, ಒಂದು ಸಿದ್ದಾಂತ ತುಂಬಿಸುವ ಕೆಲಸ ಶುರು ಆಗುತ್ತದೆ. ಅಲ್ಲಿ ಯೋಜಿತ ಕಾರ್ಯಪದ್ದತಿ ಇದೆ. ಪೊಲೀಸ್, ನ್ಯಾಯಾಂಗದವರೆಗೂ ಇದು ಹಬ್ಬಿದೆ’ ಎಂದು ವಿಷಾದ ವ್ಯಕ್ತಪಡಿಸಿದರು.