<p><strong>ಬೆಂಗಳೂರು</strong>: ‘ಸಮಾಜದಲ್ಲಿ ಮಹಿಳೆಯರು, ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಹಿಂಸೆ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟಿ, ಜಾಗೃತಿ ಮೂಡಿಸಬೇಕು’ ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ್ ಶೆಟ್ಟಿ ಸಲಹೆ ನೀಡಿದರು. </p>.<p>ಡೆವಲಪ್ಮೆಂಟ್ ಎಜುಕೇಷನ್ ಸರ್ವಿಸ್(ಡೀಡ್ಸ್), ಕಾನೂನು ಸೇವಾ ಪ್ರಾಧಿಕಾರ ಹಾಗೂ ಪ್ಯಾರಾ ಲೀಗಲ್ ಫೆಸಿಲಿಟರ್ಸ್ ಕಲೆಕ್ಟಿವ್ ಸಹಯೋಗದಲ್ಲಿ ಮಂಗಳವಾರ ನಡೆದ ಅರೆಕಾಲಿಕ ಕಾನೂನು ಸ್ವಯಂಸೇವಕರಿಗೆ ಉಚಿತ ಕಾನೂನು ಸೇವೆಗಳ ಕುರಿತ ವಿಚಾರಸಂಕಿರಣದಲ್ಲಿ ಅವರು ಮಾತನಾಡಿದರು. </p>.<p>‘ಮಹಿಳೆಯರು ಹಾಗೂ ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಹೆಚ್ಚುತ್ತಿವೆ. ಬಾಲಕಾರ್ಮಿಕ ಹಾಗೂ ದೇವದಾಸಿ ಪದ್ಧತಿಯ ಕುರಿತು ಸಮಾಜದಲ್ಲಿ ಅರಿವು ಮೂಡಿಸಬೇಕು. ಇವರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು. ಇತ್ತೀಚೆಗೆ ಪೋಕ್ಸೊ ಹಾಗೂ ಬಾಲ ಗರ್ಭಿಣಿಯರ ಪ್ರಕರಣಗಳು ಹೆಚ್ಚುತ್ತಿದ್ದು, ಇವುಗಳನ್ನು ನಿಯಂತ್ರಿಸಬೇಕು. ಈ ಬಗ್ಗೆ ರಾಜ್ಯದಾದ್ಯಂತ ಶಾಲಾ–ಕಾಲೇಜುಗಳಲ್ಲಿ ಜಾಗೃತಿ ಮೂಡಿಸಬೇಕು. ಕಾನೂನು ಸೇವಾ ಪ್ರಾಧಿಕಾರದ ಸಹಾಯವನ್ನು ಪಡೆದುಕೊಳ್ಳಬೇಕು’ ಎಂದರು.</p>.<p>‘ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುವವರು ಗ್ರಾಮೀಣ ಭಾಗದಲ್ಲಿ ಕಾನೂನು ಹಾಗೂ ಕಾಯ್ದೆಗಳ ಕುರಿತು ಜಾಗೃತಿ ಮೂಡಿಸಬೇಕು. ಅಂಗವಿಕಲರು, ವೃದ್ಧರು ಹಾಗೂ ಸಂಚಾರಕ್ಕೆ ಸಂಬಂಧಿಸಿದ ಕಾಯ್ದೆ–ಕಾನೂನುಗಳ ಕುರಿತು ತಿಳಿದುಕೊಳ್ಳಬೇಕು’ ಎಂದು ಸಲಹೆ ನೀಡಿದರು. </p>.<p>ವಕೀಲ ವಿನಯ್ ಶ್ರೀನಿವಾಸ್, ಸುಮಿತ್ರಾ ಆಚಾರ್ಯ, ಮರ್ಲಿನ್ ಮಾರ್ಟಿಸ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಮಾಜದಲ್ಲಿ ಮಹಿಳೆಯರು, ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಹಿಂಸೆ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟಿ, ಜಾಗೃತಿ ಮೂಡಿಸಬೇಕು’ ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ್ ಶೆಟ್ಟಿ ಸಲಹೆ ನೀಡಿದರು. </p>.<p>ಡೆವಲಪ್ಮೆಂಟ್ ಎಜುಕೇಷನ್ ಸರ್ವಿಸ್(ಡೀಡ್ಸ್), ಕಾನೂನು ಸೇವಾ ಪ್ರಾಧಿಕಾರ ಹಾಗೂ ಪ್ಯಾರಾ ಲೀಗಲ್ ಫೆಸಿಲಿಟರ್ಸ್ ಕಲೆಕ್ಟಿವ್ ಸಹಯೋಗದಲ್ಲಿ ಮಂಗಳವಾರ ನಡೆದ ಅರೆಕಾಲಿಕ ಕಾನೂನು ಸ್ವಯಂಸೇವಕರಿಗೆ ಉಚಿತ ಕಾನೂನು ಸೇವೆಗಳ ಕುರಿತ ವಿಚಾರಸಂಕಿರಣದಲ್ಲಿ ಅವರು ಮಾತನಾಡಿದರು. </p>.<p>‘ಮಹಿಳೆಯರು ಹಾಗೂ ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಹೆಚ್ಚುತ್ತಿವೆ. ಬಾಲಕಾರ್ಮಿಕ ಹಾಗೂ ದೇವದಾಸಿ ಪದ್ಧತಿಯ ಕುರಿತು ಸಮಾಜದಲ್ಲಿ ಅರಿವು ಮೂಡಿಸಬೇಕು. ಇವರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು. ಇತ್ತೀಚೆಗೆ ಪೋಕ್ಸೊ ಹಾಗೂ ಬಾಲ ಗರ್ಭಿಣಿಯರ ಪ್ರಕರಣಗಳು ಹೆಚ್ಚುತ್ತಿದ್ದು, ಇವುಗಳನ್ನು ನಿಯಂತ್ರಿಸಬೇಕು. ಈ ಬಗ್ಗೆ ರಾಜ್ಯದಾದ್ಯಂತ ಶಾಲಾ–ಕಾಲೇಜುಗಳಲ್ಲಿ ಜಾಗೃತಿ ಮೂಡಿಸಬೇಕು. ಕಾನೂನು ಸೇವಾ ಪ್ರಾಧಿಕಾರದ ಸಹಾಯವನ್ನು ಪಡೆದುಕೊಳ್ಳಬೇಕು’ ಎಂದರು.</p>.<p>‘ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುವವರು ಗ್ರಾಮೀಣ ಭಾಗದಲ್ಲಿ ಕಾನೂನು ಹಾಗೂ ಕಾಯ್ದೆಗಳ ಕುರಿತು ಜಾಗೃತಿ ಮೂಡಿಸಬೇಕು. ಅಂಗವಿಕಲರು, ವೃದ್ಧರು ಹಾಗೂ ಸಂಚಾರಕ್ಕೆ ಸಂಬಂಧಿಸಿದ ಕಾಯ್ದೆ–ಕಾನೂನುಗಳ ಕುರಿತು ತಿಳಿದುಕೊಳ್ಳಬೇಕು’ ಎಂದು ಸಲಹೆ ನೀಡಿದರು. </p>.<p>ವಕೀಲ ವಿನಯ್ ಶ್ರೀನಿವಾಸ್, ಸುಮಿತ್ರಾ ಆಚಾರ್ಯ, ಮರ್ಲಿನ್ ಮಾರ್ಟಿಸ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>