ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ‘ನನ್ನ ಮಗಳ ಮದುವೆ ಸಂದರ್ಭ (2007)ಮಧುಕರ ಶೆಟ್ಟಿ ನಗರದಲ್ಲಿ ಡಿಸಿಪಿ ಆಗಿದ್ದರು. ಪೊಲೀಸ್ ಭದ್ರತೆಗಾಗಿ ಅವರನ್ನು ಸಂಪರ್ಕಿಸಿದ್ದೆ. ಒಪ್ಪಿದ ಅವರು, ಒಂದು ಮನವಿ ಹಾಗೂ ನಿರ್ದಿಷ್ಟ ಮೊತ್ತವನ್ನು ಇಲಾಖೆಗೆ ಪಾವತಿಸುವಂತೆ ಸೂಚಿಸಿದರು. ಅವರ ಪ್ರಾಮಾಣಿಕತೆ ಬಗ್ಗೆ ಹೆಮ್ಮೆ ಎನಿಸಿತು' ಎಂದು ಸ್ಮರಿಸಿದರು.
ನಿವೃತ್ತ ಐಪಿಎಸ್ ಅಧಿಕಾರಿ ಡಾ.ಡಿ.ವಿ.ಗುರುಪ್ರಸಾದ್ ಮಾತನಾಡಿ, ‘ವೀರಪ್ಪನ್ ಕಾರ್ಯಾಚರಣೆ ಬಳಿಕ ನಿವೇಶನದ ಆಸೆಗಾಗಿ ಅನೇಕ ಐಪಿಎಸ್ ಅಧಿಕಾರಿಗಳು ನಾವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದೇವೆ ಎಂದು ಅರ್ಜಿಗಳನ್ನು ಹಾಕಿದ್ದರು. ಆದರೆ, ಮಧುಕರ್ ಶೆಟ್ಟಿ ಇದ್ಯಾವುದನ್ನೂ ಬಯಸದೇ ದೂರ ಇದ್ದರು. ನಕ್ಸಲರ ಮನಪರಿವರ್ತನೆಗೆ ಮುಂದಾಗಿದ್ದರು. ಅವರ ಕುರಿತು ಪುಸ್ತಕ ಬರೆದಿದ್ದರು. ಆದರೆ, ಅದು ಪ್ರಕಟವಾದಂತಿಲ್ಲ’ ಎಂದರು.