<p><strong>ಬೆಂಗಳೂರು:</strong> ‘ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತ್ವರಿತವಾಗಿ ಪ್ರಾರಂಭಿಸಬೇಕು’ ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. </p>.<p>ಜಿಬಿಎ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಳ್ಳುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಬುಧವಾರ ನಡೆದ ವರ್ಚ್ಯುವಲ್ ಸಭೆಯಲ್ಲಿ ಅವರು ಮಾತನಾಡಿದರು. </p>.<p>‘ಸಮೀಕ್ಷೆ ನಡೆಸಲು ವಿವಿಧ ಇಲಾಖೆಗಳಿಂದ ನಿಯೋಜಿಸಿರುವ ಸಮೀಕ್ಷಾದಾರರಿಗೆ ಆಯಾ ನಗರ ಪಾಲಿಕೆಗಳಲ್ಲಿ ತರಬೇತಿ ನೀಡಬೇಕು. ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಸಮೀಕ್ಷಾ ಕಾರ್ಯವನ್ನು ನಡೆಸಬೇಕು. ಆಶಾ ಕಾರ್ಯಕರ್ತೆಯರನ್ನು ಈ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಬೇಕು. ಈ ಬಗ್ಗೆ ಅವರಿಗೆ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. </p>.<p>‘ಸಮೀಕ್ಷೆಯ ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಆಯಾ ನಗರ ಪಾಲಿಕೆಗಳ ಆಯುಕ್ತರು ತರಬೇತಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಸಮೀಕ್ಷಾ ಕಾರ್ಯಕ್ಕೆ ಗೈರು ಹಾಜರಾದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು. </p>.<p>‘ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಸಮೀಕ್ಷೆಯ ಕಾರ್ಯವನ್ನು ಪರಿಣಾಮಕಾರಿಯಾಗಿ ಹಾಗೂ ಯಶಸ್ವಿಯಾಗಿ ನಡೆಸಬೇಕು. ಅದಕ್ಕೆ ಬೇಕಾದಂತಹ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಜಿಬಿಎ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು’ ಎಂದರು. </p>.<p>ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರು ಮಾತನಾಡಿ, ‘ನಗರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸಮೀಕ್ಷೆಗಾಗಿ ಜಿಪಿಎಸ್ ಆಧಾರಿತ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದ್ದು, ಮನೆ-ಮನೆಗೆ ಅಂಟಿಸುವ ಸ್ಟಿಕ್ಕರ್ಗಳಲ್ಲಿ ಯುಎಚ್ಐಡಿ ಸಂಖ್ಯೆಯನ್ನು ನೀಡಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತ್ವರಿತವಾಗಿ ಪ್ರಾರಂಭಿಸಬೇಕು’ ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. </p>.<p>ಜಿಬಿಎ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಳ್ಳುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಬುಧವಾರ ನಡೆದ ವರ್ಚ್ಯುವಲ್ ಸಭೆಯಲ್ಲಿ ಅವರು ಮಾತನಾಡಿದರು. </p>.<p>‘ಸಮೀಕ್ಷೆ ನಡೆಸಲು ವಿವಿಧ ಇಲಾಖೆಗಳಿಂದ ನಿಯೋಜಿಸಿರುವ ಸಮೀಕ್ಷಾದಾರರಿಗೆ ಆಯಾ ನಗರ ಪಾಲಿಕೆಗಳಲ್ಲಿ ತರಬೇತಿ ನೀಡಬೇಕು. ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಸಮೀಕ್ಷಾ ಕಾರ್ಯವನ್ನು ನಡೆಸಬೇಕು. ಆಶಾ ಕಾರ್ಯಕರ್ತೆಯರನ್ನು ಈ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಬೇಕು. ಈ ಬಗ್ಗೆ ಅವರಿಗೆ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. </p>.<p>‘ಸಮೀಕ್ಷೆಯ ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಆಯಾ ನಗರ ಪಾಲಿಕೆಗಳ ಆಯುಕ್ತರು ತರಬೇತಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಸಮೀಕ್ಷಾ ಕಾರ್ಯಕ್ಕೆ ಗೈರು ಹಾಜರಾದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು. </p>.<p>‘ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಸಮೀಕ್ಷೆಯ ಕಾರ್ಯವನ್ನು ಪರಿಣಾಮಕಾರಿಯಾಗಿ ಹಾಗೂ ಯಶಸ್ವಿಯಾಗಿ ನಡೆಸಬೇಕು. ಅದಕ್ಕೆ ಬೇಕಾದಂತಹ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಜಿಬಿಎ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು’ ಎಂದರು. </p>.<p>ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರು ಮಾತನಾಡಿ, ‘ನಗರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸಮೀಕ್ಷೆಗಾಗಿ ಜಿಪಿಎಸ್ ಆಧಾರಿತ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದ್ದು, ಮನೆ-ಮನೆಗೆ ಅಂಟಿಸುವ ಸ್ಟಿಕ್ಕರ್ಗಳಲ್ಲಿ ಯುಎಚ್ಐಡಿ ಸಂಖ್ಯೆಯನ್ನು ನೀಡಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>