‘ಕೆಲ ದೇಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಆರೋಪಿಗಳ ದೃಷ್ಟಿಯಲ್ಲಿ ನೋಡಲಾಗುತ್ತಿದೆ. ಅವರಿಗೆ ಸ್ವಾಭಿಮಾನದ ಜೀವನ ನಡೆಸಲೂ ಅವಕಾಶಗಳನ್ನು ನೀಡುತ್ತಿಲ್ಲ. ಇಲ್ಲಿಯೂ ಅವರನ್ನು ಸೂಕ್ತವಾಗಿ ನಡೆಸಿಕೊಂಡಿರಲಿಲ್ಲ. ನವತೇಜ್ಸಿಂಗ್ ಜೋಹರ್ ಮತ್ತು ಇತರರ ವಿರುದ್ಧದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಚರಿತ್ರಾರ್ಹ. ಭಾರತೀಯ ದಂಡ ಸಂಹಿತೆಯ 377ನೇ ಪರಿಚ್ಛೇದದ ವ್ಯಾಪ್ತಿಯಿಂದ ಸಮಲೈಂಗಿಕ ಸಂಬಂಧವನ್ನು ಮುಕ್ತಗೊಳಿಸಿತ್ತು. ಈ ತೀರ್ಪು ಸಲಿಂಗಿಗಳು, ದ್ವಿಲಿಂಗಿಗಳು ಹಾಗೂ ಲಿಂಗಪರಿವರ್ತಿತರ ಸಮುದಾಯಕ್ಕೆ ಸಂತೋಷವನ್ನುಂಟು ಮಾಡಿತ್ತು. ಆದರೆ, ಇಂತಹ ತೀರ್ಪುಗಳು ಕೇವಲ ನ್ಯಾಯಪುಸ್ತಕದಲ್ಲಷ್ಟೇ ಉಳಿದುಕೊಳ್ಳುತ್ತಿವೆ’ ಎಂದು ಹೇಳಿದರು.