<p><strong>ಪೀಣ್ಯ ದಾಸರಹಳ್ಳಿ:</strong> ಎಂಇಐ ಬಡಾವಣೆಯಲ್ಲಿ ವಾಸವಿದ್ದ ಸಾಫ್ಟ್ವೇರ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ವಿದ್ಯಾಜ್ಯೋತಿ (29) ಮೃತ ಯುವತಿ. ತಂದೆ ಉಮೇಶ್ ಎಂಬುವರು ನೀಡಿದ ದೂರಿನ ಮೇರೆಗೆ ಬಾಗಲಗುಂಟೆ ಠಾಣೆ ಪೊಲೀಸರು ಯುಡಿಆರ್ (ಅಸಹಜ ಸಾವು ಪ್ರಕರಣ) ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.</p>.<p>‘ನೀನು ಅಲ್ಪಾಯುಷಿ’ ಎಂದು ಜ್ಯೋತಿಷಿ ಹೇಳಿದ್ದರಿಂದ ಹೆದರಿ, ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. </p>.<p>ಕೋರಮಂಗಲದ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ವಿದ್ಯಾ, ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ತಂದೆ-ತಾಯಿಯನ್ನು ಒಪ್ಪಿಸಿದ್ದರು. ಇದೇ ವೇಳೆ ಜ್ಯೋತಿಷಿಯೊಬ್ಬರು ಭವಿಷ್ಯ ಹೇಳಿದ್ದರು. ‘ಮದುವೆಯಾದ 2 ವರ್ಷ ಮಾತ್ರ ಸಂಸಾರ ಚೆನ್ನಾಗಿರುತ್ತದೆ. ನಂತರ ತೊಂದರೆಯಾಗಲಿದೆ. ಅದಕ್ಕಾಗಿ 9 ದಿನ ಪೂಜೆ ಮಾಡಿಸಬೇಕು’ ಎಂದಿದ್ದರು.</p>.<p>ಜ್ಯೋತಿಷಿ ಮಾತು ಕೇಳಿ 9 ದಿನ ಮಾರಮ್ಮ ದೇವಿ ಪೂಜೆ ಮಾಡಿದ್ದರು. ಕೊನೆ ದಿನ ಶುಕ್ರವಾರ ಪೂಜೆ ಮಾಡಿಸಿ ದೇವಿಗೆ ತಾಳಿ ಸಮರ್ಪಿಸಬೇಕಾಗಿತ್ತು. ಪೂಜೆಗೆ ಕುಟುಂಬಸ್ಥರು ಸಿದ್ಧತೆ ಮಾಡಿಕೊಂಡಿದ್ದರು. ಈ ವೇಳೆ ಯುವತಿ ಕೊಠಡಿಗೆ ತೆರಳಿ, ರಾತ್ರಿಯಾದರೂ ಬಾಗಿಲು ತೆರೆದಿರಲಿಲ್ಲ. </p>.<p>ಪೂಜೆ ತಡವಾಗುತ್ತಿರುವ ಪರಿಣಾಮ ತಾಯಿ ಮಗಳನ್ನು ಕರೆಯಲು ಹೋಗಿದ್ದಾರೆ. ಬಾಗಿಲು ಬಡಿದರೂ ತೆರೆಯದ ಕಾರಣ ಕಿಟಕಿಯಿಂದ ನೋಡಿದಾಗ, ಮಗಳು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಗಮನಕ್ಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಾಗಲಗುಂಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ವಿಕ್ಟೊರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. </p>.<p>‘ಸಾಫ್ಟ್ವೇರ್ ಎಂಜಿನಿಯರ್ ವಿದ್ಯಾ ಜ್ಯೋತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಎಂಇಐ ಬಡಾವಣೆಯಲ್ಲಿ ವಾಸವಿದ್ದ ಸಾಫ್ಟ್ವೇರ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ವಿದ್ಯಾಜ್ಯೋತಿ (29) ಮೃತ ಯುವತಿ. ತಂದೆ ಉಮೇಶ್ ಎಂಬುವರು ನೀಡಿದ ದೂರಿನ ಮೇರೆಗೆ ಬಾಗಲಗುಂಟೆ ಠಾಣೆ ಪೊಲೀಸರು ಯುಡಿಆರ್ (ಅಸಹಜ ಸಾವು ಪ್ರಕರಣ) ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.</p>.<p>‘ನೀನು ಅಲ್ಪಾಯುಷಿ’ ಎಂದು ಜ್ಯೋತಿಷಿ ಹೇಳಿದ್ದರಿಂದ ಹೆದರಿ, ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. </p>.<p>ಕೋರಮಂಗಲದ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ವಿದ್ಯಾ, ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ತಂದೆ-ತಾಯಿಯನ್ನು ಒಪ್ಪಿಸಿದ್ದರು. ಇದೇ ವೇಳೆ ಜ್ಯೋತಿಷಿಯೊಬ್ಬರು ಭವಿಷ್ಯ ಹೇಳಿದ್ದರು. ‘ಮದುವೆಯಾದ 2 ವರ್ಷ ಮಾತ್ರ ಸಂಸಾರ ಚೆನ್ನಾಗಿರುತ್ತದೆ. ನಂತರ ತೊಂದರೆಯಾಗಲಿದೆ. ಅದಕ್ಕಾಗಿ 9 ದಿನ ಪೂಜೆ ಮಾಡಿಸಬೇಕು’ ಎಂದಿದ್ದರು.</p>.<p>ಜ್ಯೋತಿಷಿ ಮಾತು ಕೇಳಿ 9 ದಿನ ಮಾರಮ್ಮ ದೇವಿ ಪೂಜೆ ಮಾಡಿದ್ದರು. ಕೊನೆ ದಿನ ಶುಕ್ರವಾರ ಪೂಜೆ ಮಾಡಿಸಿ ದೇವಿಗೆ ತಾಳಿ ಸಮರ್ಪಿಸಬೇಕಾಗಿತ್ತು. ಪೂಜೆಗೆ ಕುಟುಂಬಸ್ಥರು ಸಿದ್ಧತೆ ಮಾಡಿಕೊಂಡಿದ್ದರು. ಈ ವೇಳೆ ಯುವತಿ ಕೊಠಡಿಗೆ ತೆರಳಿ, ರಾತ್ರಿಯಾದರೂ ಬಾಗಿಲು ತೆರೆದಿರಲಿಲ್ಲ. </p>.<p>ಪೂಜೆ ತಡವಾಗುತ್ತಿರುವ ಪರಿಣಾಮ ತಾಯಿ ಮಗಳನ್ನು ಕರೆಯಲು ಹೋಗಿದ್ದಾರೆ. ಬಾಗಿಲು ಬಡಿದರೂ ತೆರೆಯದ ಕಾರಣ ಕಿಟಕಿಯಿಂದ ನೋಡಿದಾಗ, ಮಗಳು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಗಮನಕ್ಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಾಗಲಗುಂಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ವಿಕ್ಟೊರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. </p>.<p>‘ಸಾಫ್ಟ್ವೇರ್ ಎಂಜಿನಿಯರ್ ವಿದ್ಯಾ ಜ್ಯೋತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>