ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಗುದ್ದಿ ಸಾಫ್ಟ್‌ವೇರ್‌ ಎಂಜಿನಿಯರ್ ಸಾವು

Last Updated 23 ಜನವರಿ 2023, 20:11 IST
ಅಕ್ಷರ ಗಾತ್ರ

ಬೆಂಗಳೂರು: ಎಚ್‌ಎಸ್‌ಆರ್‌ ಲೇಔಟ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಸಾಫ್ಟ್‌ವೇರ್ ಎಂಜಿನಿಯರ್ ವಿಶ್ವನಾಥ್ ಗೌಡ (42) ಎಂಬುವರು ಮೃತಪಟ್ಟಿದ್ದಾರೆ.

‘ದೊಡ್ಡಕನ್ನಲ್ಲಿ ನಿವಾಸಿ ವಿಶ್ವನಾಥ್, ಸಾಫ್ಟ್‌ವೇರ್ ಎಂಜಿನಿಯರ್ ಕೆಲಸ ಮಾಡುತ್ತಿದ್ದರು. ಭಾನುವಾರ ತಡರಾತ್ರಿ ಎ.ಇ.ಟಿ ಕಾಲೇಜು ಕಡೆಯಿಂದ ದೊಡ್ಡಕನ್ನಲ್ಲಿ ಕಡೆಗೆ ನಡೆದುಕೊಂಡು ಹೊರಟಿದ್ದರು. ಇದೇ ವೇಳೆ ಅವರಿಗೆ ವಾಹನವೊಂದು ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡು ಅವರು ಅಸುನೀಗಿದ್ದಾರೆ’ ಎಂದು ಪೊಲೀಸರು ಹೇಳಿದರು. ‘ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT