<p><strong>ಬೆಂಗಳೂರು</strong>: ಮನೆಯಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಹೆಸರಘಟ್ಟ ಬಳಿಯ ಕಲ್ಲು ಗುಡ್ಡದಹಳ್ಳಿ ನಿವಾಸಿಗಳಾದ ಶಂಕರ್ (30), ಕುಮಾರ್ (21) ಹಾಗೂ ಶ್ರೀನಿವಾಸ್ ಬಂಧಿತರು. ಸಲ್ಫರ್ ಪೌಡರ್, ನೈಟ್ರೇಟ್, ಸ್ಫೋಟಕ ಮದ್ದು ಹಾಗೂ ರಾಸಾಯನಿಕ ಪೇಸ್ಟ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮೂವರು ಆರೋಪಿಗಳು, ಬಂಡೆಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಲ್ಲು ಗುಡ್ಡದಹಳ್ಳಿಯಲ್ಲಿ ಸಣ್ಣ ಪ್ರಮಾಣದ ಕ್ವಾರಿಗಳಿದ್ದು, ಅಲ್ಲಿ ಕಲ್ಲುಗಳನ್ನು ಒಡೆಯಲು ಸ್ಫೋಟಕಗಳನ್ನು ಬಳಸಲಾಗುತ್ತಿತ್ತು. ಈ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಮನೆಯಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದ ಬಗ್ಗೆ ಮಾಹಿತಿ ಬಂದಿತ್ತು. ಪಿಎಸ್ಐ ನೇತೃತ್ವದ ತಂಡ ಮನೆಯಲ್ಲಿ ಶೋಧ ನಡೆಸಿತ್ತು. ಅದೇ ಸಂದರ್ಭದಲ್ಲಿ ಸ್ಫೋಟಕಗಳು ಪತ್ತೆಯಾದವು. ಬಳಿಕ, ಮೂವರನ್ನು ಬಂಧಿಸಲಾಯಿತು.’</p>.<p>‘ಆರೋಪಿಗಳ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣಗಳಿಲ್ಲ. ಬಂಡೆ ಒಡೆಯಲು ಸ್ಫೋಟಕ ತಂದಿದ್ದಾಗಿ ಆರೋಪಿಗಳು ಹೇಳುತ್ತಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮನೆಯಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಹೆಸರಘಟ್ಟ ಬಳಿಯ ಕಲ್ಲು ಗುಡ್ಡದಹಳ್ಳಿ ನಿವಾಸಿಗಳಾದ ಶಂಕರ್ (30), ಕುಮಾರ್ (21) ಹಾಗೂ ಶ್ರೀನಿವಾಸ್ ಬಂಧಿತರು. ಸಲ್ಫರ್ ಪೌಡರ್, ನೈಟ್ರೇಟ್, ಸ್ಫೋಟಕ ಮದ್ದು ಹಾಗೂ ರಾಸಾಯನಿಕ ಪೇಸ್ಟ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮೂವರು ಆರೋಪಿಗಳು, ಬಂಡೆಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಲ್ಲು ಗುಡ್ಡದಹಳ್ಳಿಯಲ್ಲಿ ಸಣ್ಣ ಪ್ರಮಾಣದ ಕ್ವಾರಿಗಳಿದ್ದು, ಅಲ್ಲಿ ಕಲ್ಲುಗಳನ್ನು ಒಡೆಯಲು ಸ್ಫೋಟಕಗಳನ್ನು ಬಳಸಲಾಗುತ್ತಿತ್ತು. ಈ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಮನೆಯಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದ ಬಗ್ಗೆ ಮಾಹಿತಿ ಬಂದಿತ್ತು. ಪಿಎಸ್ಐ ನೇತೃತ್ವದ ತಂಡ ಮನೆಯಲ್ಲಿ ಶೋಧ ನಡೆಸಿತ್ತು. ಅದೇ ಸಂದರ್ಭದಲ್ಲಿ ಸ್ಫೋಟಕಗಳು ಪತ್ತೆಯಾದವು. ಬಳಿಕ, ಮೂವರನ್ನು ಬಂಧಿಸಲಾಯಿತು.’</p>.<p>‘ಆರೋಪಿಗಳ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣಗಳಿಲ್ಲ. ಬಂಡೆ ಒಡೆಯಲು ಸ್ಫೋಟಕ ತಂದಿದ್ದಾಗಿ ಆರೋಪಿಗಳು ಹೇಳುತ್ತಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>