<p>ಸೋಲಾಪುರ: ಆಯುಷ್ಮಾನ್ ಭಾರತ ಯೋಜನೆಯಡಿ ಇ-ಕೆವೈಸಿ ಹಾಗೂ ಆಯುಷ್ಮಾನ್ ಕಾರ್ಡ್ ನಿರ್ಮಾಣ ಅಭಿಯಾನದಲ್ಲಿ ಸೋಲಾಪುರ ಜಿಲ್ಲೆ ಕಳೆದ ಎಂಟು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.</p>.<p>ಜಿಲ್ಲಾ ಪರಿಷತ್ತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕುಶಲ್ ಜೈನ್ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ಇಲಾಖೆಯ ಮೂಲಕ ಈ ವಿಶೇಷ ಅಭಿಯಾನವನ್ನು ನಡೆಸಲಾಗಿದೆ.</p>.<p>ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ ಯೋಜನೆಯ ಕೆಲಸ ನಿರೀಕ್ಷೆಗಿಂತ ಕಡಿಮೆ ಇರುವುದನ್ನು ಗಮನಿಸಿದ ಬಳಿಕ ಆಡಳಿತವು ತಕ್ಷಣ ವಿಶೇಷ ಅಭಿಯಾನ ಆರಂಭಿಸಿತು. ಆರೋಗ್ಯ ವ್ಯವಸ್ಥೆಯನ್ನು ಸಕ್ರಿಯಗೊಳಿಸಿ ಲಾಭಾರ್ಥಿಗಳ ಇ-ಕೆವೈಸಿಯನ್ನು ಪೂರ್ಣಗೊಳಿಸಿ ಆಯುಷ್ಮಾನ್ ಕಾರ್ಡ್ ತಯಾರಿಸಲು ವೇಗ ನೀಡಲಾಗಿದೆ. ಏಪ್ರಿಲ್ 28ರಿಂದ ಮೇ 6ರ ಅವಧಿಯಲ್ಲಿ ಸೊಲಾಪುರ ಜಿಲ್ಲೆಯಲ್ಲಿ ಸುಮಾರು 12,167 ಆಯುಷ್ಮಾನ್ ಭಾರತ ಇ-ಕೆವೈಸಿ ಹಾಗೂ ಕಾರ್ಡ್ ನಿರ್ಮಾಣ ದಾಖಲಾಗಿದೆ. ಈ ಕಾರ್ಯದಿಂದ ಜಿಲ್ಲೆ ರಾಜ್ಯದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.</p>.<p>ಈ ಅಭಿಯಾನ ಯಶಸ್ವಿಯಾಗಲು ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು, ವೈದ್ಯಕೀಯ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸಂಬಂಧಿತ ಸಿಬ್ಬಂದಿ ಸಹಕಾರ ನೀಡಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ತೆರಳಿ ನಾಗರಿಕರಿಗೆ ಯೋಜನೆಯ ಮಾಹಿತಿ ನೀಡುವುದು, ಅಗತ್ಯ ದಾಖಲೆಗಳನ್ನು ಪೂರ್ಣಗೊಳಿಸುವುದು ಮತ್ತು ತಕ್ಷಣ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವ ಕಾರ್ಯ ನಡೆಯುತ್ತಿದೆ.</p>.<p>ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೈನ್ ಅವರು ಆರೋಗ್ಯ ಇಲಾಖೆಗೆ ಇನ್ನಷ್ಟು ವೇಗವಾಗಿ ಕೆಲಸ ಮಾಡಲು ಸೂಚನೆ ನೀಡಿದ್ದಾರೆ. ಹೆಚ್ಚಿನ ಅರ್ಹ ಲಾಭಾರ್ಥಿಗಳ ಇ-ಕೆವೈಸಿ ಪೂರ್ಣಗೊಳಿಸಿ ಆಯುಷ್ಮಾನ್ ಕಾರ್ಡ್ ಸಿದ್ಧಪಡಿಸುವಂತೆ ನಿರ್ದೇಶನ ನೀಡಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-26-836389193</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಲಾಪುರ: ಆಯುಷ್ಮಾನ್ ಭಾರತ ಯೋಜನೆಯಡಿ ಇ-ಕೆವೈಸಿ ಹಾಗೂ ಆಯುಷ್ಮಾನ್ ಕಾರ್ಡ್ ನಿರ್ಮಾಣ ಅಭಿಯಾನದಲ್ಲಿ ಸೋಲಾಪುರ ಜಿಲ್ಲೆ ಕಳೆದ ಎಂಟು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.</p>.<p>ಜಿಲ್ಲಾ ಪರಿಷತ್ತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕುಶಲ್ ಜೈನ್ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ಇಲಾಖೆಯ ಮೂಲಕ ಈ ವಿಶೇಷ ಅಭಿಯಾನವನ್ನು ನಡೆಸಲಾಗಿದೆ.</p>.<p>ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ ಯೋಜನೆಯ ಕೆಲಸ ನಿರೀಕ್ಷೆಗಿಂತ ಕಡಿಮೆ ಇರುವುದನ್ನು ಗಮನಿಸಿದ ಬಳಿಕ ಆಡಳಿತವು ತಕ್ಷಣ ವಿಶೇಷ ಅಭಿಯಾನ ಆರಂಭಿಸಿತು. ಆರೋಗ್ಯ ವ್ಯವಸ್ಥೆಯನ್ನು ಸಕ್ರಿಯಗೊಳಿಸಿ ಲಾಭಾರ್ಥಿಗಳ ಇ-ಕೆವೈಸಿಯನ್ನು ಪೂರ್ಣಗೊಳಿಸಿ ಆಯುಷ್ಮಾನ್ ಕಾರ್ಡ್ ತಯಾರಿಸಲು ವೇಗ ನೀಡಲಾಗಿದೆ. ಏಪ್ರಿಲ್ 28ರಿಂದ ಮೇ 6ರ ಅವಧಿಯಲ್ಲಿ ಸೊಲಾಪುರ ಜಿಲ್ಲೆಯಲ್ಲಿ ಸುಮಾರು 12,167 ಆಯುಷ್ಮಾನ್ ಭಾರತ ಇ-ಕೆವೈಸಿ ಹಾಗೂ ಕಾರ್ಡ್ ನಿರ್ಮಾಣ ದಾಖಲಾಗಿದೆ. ಈ ಕಾರ್ಯದಿಂದ ಜಿಲ್ಲೆ ರಾಜ್ಯದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.</p>.<p>ಈ ಅಭಿಯಾನ ಯಶಸ್ವಿಯಾಗಲು ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು, ವೈದ್ಯಕೀಯ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸಂಬಂಧಿತ ಸಿಬ್ಬಂದಿ ಸಹಕಾರ ನೀಡಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ತೆರಳಿ ನಾಗರಿಕರಿಗೆ ಯೋಜನೆಯ ಮಾಹಿತಿ ನೀಡುವುದು, ಅಗತ್ಯ ದಾಖಲೆಗಳನ್ನು ಪೂರ್ಣಗೊಳಿಸುವುದು ಮತ್ತು ತಕ್ಷಣ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವ ಕಾರ್ಯ ನಡೆಯುತ್ತಿದೆ.</p>.<p>ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೈನ್ ಅವರು ಆರೋಗ್ಯ ಇಲಾಖೆಗೆ ಇನ್ನಷ್ಟು ವೇಗವಾಗಿ ಕೆಲಸ ಮಾಡಲು ಸೂಚನೆ ನೀಡಿದ್ದಾರೆ. ಹೆಚ್ಚಿನ ಅರ್ಹ ಲಾಭಾರ್ಥಿಗಳ ಇ-ಕೆವೈಸಿ ಪೂರ್ಣಗೊಳಿಸಿ ಆಯುಷ್ಮಾನ್ ಕಾರ್ಡ್ ಸಿದ್ಧಪಡಿಸುವಂತೆ ನಿರ್ದೇಶನ ನೀಡಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-26-836389193</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>