ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಸ್ಮರಣಾರ್ಥ ಸುಮಾರು 450 ಟನ್ ತೂಕದ ವೀರಗಲ್ಲನ್ನು ಸ್ಥಾಪಿಸಲಾಗುತ್ತಿದೆ. 75 ಅಡಿ ಉದ್ದದ ಏಕಶಿಲಾ ಸ್ಮಾರಕವನ್ನು ದೇವನಹಳ್ಳಿಯ ಗಣಿ ಪ್ರದೇಶದಿಂದ ಬಳ್ಳಾರಿ ರಸ್ತೆ ಮೂಲಕ ಸ್ಮಾರಕ ಪ್ರದೇಶಕ್ಕೆ ಸಾಗಿಸಲಾಗುತ್ತದೆ. ಪೊಲೀಸ್ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಮತ್ತು ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.