<p><strong>ಕೆ.ಆರ್.ಪುರ: </strong>‘ದೇಶ ಸುಭದ್ರವಾಗಿರಲು ಸೈನಿಕರ ಪಾತ್ರ ಮಹತ್ವದ್ದು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸೈನಿಕರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು’ ಎಂದು ಸಂಸದ ಪಿ.ಸಿ.ಮೋಹನ್ ತಿಳಿಸಿದರು.</p>.<p>ಕಲ್ಯಾಣನಗರ ನಾಗರಿಕರ ಸಾಂಸ್ಕೃತಿಕ ವೇದಿಕೆ ವತಿಯಿಂದಕಾಚರಕನಹಳ್ಳಿಯಲ್ಲಿ ಭಾನುವಾರ ನಡೆದ ಸ್ವಾತಂತ್ರ್ಯ ದಿನ ಹಾಗೂ ನಿವೃತ್ತ ಸೇನಾ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಅನೇಕ ಮಹನೀಯರ ಪ್ರಾಣತ್ಯಾಗದಿಂದ ದೇಶ ಸುಭದ್ರವಾಗಿದೆ. ನಮ್ಮ ಮೇಲೆ ಹಿಡಿತ ಸಾಧಿಸಿದ್ದ ಬ್ರಿಟಿಷರಿಂದ ಸ್ವತಂತ್ರಗೊಂಡ ದಿನವಿದು.ದೇಶದ ಜನರ ರಕ್ಷಣೆಗಾಗಿ ಸೈನಿಕರು ತಮ್ಮ ಪ್ರಾಣದ ಹಂಗು ತೊರೆದು, ಕಾಯುತ್ತಿದ್ದಾರೆ. ಅವರನ್ನು ಸನ್ಮಾನಿಸುವುದು ಶ್ಲಾಘನೀಯ’ ಎಂದರು.</p>.<p>ಬಿಜೆಪಿ ಮುಖಂಡ ಪದ್ಮನಾಭರೆಡ್ಡಿ,‘ಕಾಚರಕನಹಳ್ಳಿಯಲ್ಲಿ ಯೋಧರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಪರಮವೀರ ಚಕ್ರ ಪ್ರಶಸ್ತಿ ಪಡೆದ ಲೆಫ್ಟಿನೆಂಟ್ ಕರ್ನಲ್ ಬಿ.ಎಸ್.ಗಣಪತಿ ಇದೇ ವಾರ್ಡಿನವರು. ಒಟ್ಟು ಸೇನಾ ವಲಯಗಳಲ್ಲಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ 75 ಮಂದಿಗೆ ಸನ್ಮಾನ ಮಾಡಲಾಯಿತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ: </strong>‘ದೇಶ ಸುಭದ್ರವಾಗಿರಲು ಸೈನಿಕರ ಪಾತ್ರ ಮಹತ್ವದ್ದು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸೈನಿಕರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು’ ಎಂದು ಸಂಸದ ಪಿ.ಸಿ.ಮೋಹನ್ ತಿಳಿಸಿದರು.</p>.<p>ಕಲ್ಯಾಣನಗರ ನಾಗರಿಕರ ಸಾಂಸ್ಕೃತಿಕ ವೇದಿಕೆ ವತಿಯಿಂದಕಾಚರಕನಹಳ್ಳಿಯಲ್ಲಿ ಭಾನುವಾರ ನಡೆದ ಸ್ವಾತಂತ್ರ್ಯ ದಿನ ಹಾಗೂ ನಿವೃತ್ತ ಸೇನಾ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಅನೇಕ ಮಹನೀಯರ ಪ್ರಾಣತ್ಯಾಗದಿಂದ ದೇಶ ಸುಭದ್ರವಾಗಿದೆ. ನಮ್ಮ ಮೇಲೆ ಹಿಡಿತ ಸಾಧಿಸಿದ್ದ ಬ್ರಿಟಿಷರಿಂದ ಸ್ವತಂತ್ರಗೊಂಡ ದಿನವಿದು.ದೇಶದ ಜನರ ರಕ್ಷಣೆಗಾಗಿ ಸೈನಿಕರು ತಮ್ಮ ಪ್ರಾಣದ ಹಂಗು ತೊರೆದು, ಕಾಯುತ್ತಿದ್ದಾರೆ. ಅವರನ್ನು ಸನ್ಮಾನಿಸುವುದು ಶ್ಲಾಘನೀಯ’ ಎಂದರು.</p>.<p>ಬಿಜೆಪಿ ಮುಖಂಡ ಪದ್ಮನಾಭರೆಡ್ಡಿ,‘ಕಾಚರಕನಹಳ್ಳಿಯಲ್ಲಿ ಯೋಧರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಪರಮವೀರ ಚಕ್ರ ಪ್ರಶಸ್ತಿ ಪಡೆದ ಲೆಫ್ಟಿನೆಂಟ್ ಕರ್ನಲ್ ಬಿ.ಎಸ್.ಗಣಪತಿ ಇದೇ ವಾರ್ಡಿನವರು. ಒಟ್ಟು ಸೇನಾ ವಲಯಗಳಲ್ಲಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ 75 ಮಂದಿಗೆ ಸನ್ಮಾನ ಮಾಡಲಾಯಿತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>