<p><strong>ಬೆಂಗಳೂರು:</strong> ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್ಡಬ್ಲ್ಯುಎಂಎಲ್) ಸಂಪೂರ್ಣ ಕಾರ್ಯವೈಖರಿ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.</p>.<p>ಮುಖ್ಯಮಂತ್ರಿ ಅವರು ನಗರಾಭಿವೃದ್ಧಿ ಇಲಾಖೆಗೆ ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಜೂನ್ 20ರಂದು ಕಳುಹಿಸಿದ್ದ ಟಿಪ್ಪಣಿಯನ್ನು ಮಾರ್ಪಡಿಸಿ, ಮುಖ್ಯ ಕಾರ್ಯದರ್ಶಿಯವರಿಗೆ ಜೂನ್ 26ರಂದು ಎಸ್ಐಟಿ ರಚಿಸಲು ಟಿಪ್ಪಣಿ ಕಳುಹಿಸಿದ್ದಾರೆ. ಬಿಎಸ್ಡಬ್ಲ್ಯುಎಂಎಲ್ ಟೆಂಡರ್ ಹಾಗೂ ಕಾರ್ಯಾದೇಶ ಪ್ರಕ್ರಿಯೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ಪಾತ್ರವೂ ಇರುವುದರಿಂದ, ಆ ಇಲಾಖೆಯ ಅಧಿಕಾರಿಗಳಿಂದ ತನಿಖೆ ನಡೆಸುವುದು ಬೇಡ ಎಂಬ ಉದ್ದೇಶದಿಂದ ಎಸ್ಐಟಿ ರಚಿಸಲು ಆದೇಶಿಸಿದ್ದಾರೆ.</p>.<p>ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ, ಎಸ್ಐಟಿ ರಚಿಸುವ ಬಗ್ಗೆ ಅಗತ್ಯ ಪ್ರಸ್ತಾವದೊಂದಿಗೆ ಕಡತ ಮಂಡಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಆದರೆ, ಮುಖ್ಯ ಕಾರ್ಯದರ್ಶಿಯವರು ಮತ್ತೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೇ ಟಿಪ್ಪಣಿಯನ್ನು ಕಳುಹಿಸಿರುವುದು ಗೊಂದಲಕ್ಕೀಡು ಮಾಡಿದೆ.</p>.<p>ಬಿಎಸ್ಡಬ್ಲ್ಯುಎಂಎಲ್ನಿಂದ ಸರ್ಕಾರದ ಹಣ ದುರುಪಯೋಗವಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ಆರ್. ರಮೇಶ್ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದರು. ‘ಪ್ರಜಾವಾಣಿ’ಯಲ್ಲಿ ‘ಗುತ್ತಿಗೆ ದೋಷಯುಕ್ತ: ₹13 ಕೋಟಿ ಬಿಡುಗಡೆ’ ಶೀರ್ಷಿಕೆಯಡಿ ಜೂನ್ 20ರಂದು ಹಾಗೂ ‘ಕಸ ಸಾಗಣೆಗೆ ದುಪ್ಪಟ್ಟಿಗೂ ಹೆಚ್ಚು ವೆಚ್ಚ’ ವರದಿ 2022ರ ಡಿ.20ರಂದು ಪ್ರಕಟವಾಗಿತ್ತು.</p>.<p>ಬಿಎಸ್ಡಬ್ಲ್ಯುಎಂಎಲ್ ಸ್ಥಾಪನೆಯಾದಂದಿನಿಂದ ನೀಡಿರುವ ಕಾರ್ಯಾದೇಶಗಳು, ಚಾಲ್ತಿಯಲ್ಲಿರುವ ಟೆಂಡರ್ ಪ್ರಕ್ರಿಯೆಗಳನ್ನು ಕೂಡಲೇ ರದ್ದುಗೊಳಿಸಬೇಕು. ಅನುಷ್ಠಾನಗೊಳಿಸಿದ ಕಾಮಗಾರಿಗಳು, ಹಣ ದುರುಪಯೋಗ, ಸಂಸ್ಥೆಯ ಸಂಪೂರ್ಣ ಕಾರ್ಯವೈಖರಿ ಬಗ್ಗೆ ಸಮಗ್ರ ತನಿಖೆ ನಡೆಸಿ ವಿವರವಾದ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದ್ದರು. ಇದೀಗ, ಆ ಎಲ್ಲ ಪ್ರಕ್ರಿಯೆ ರದ್ದುಗೊಳಿಸುವ ಜೊತೆಗೆ ತನಿಖೆಗೆ ಎಸ್ಐಟಿ ರಚಿಸಲು ತೀರ್ಮಾನಿಸಲಾಗಿದೆ.</p>.<p>ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿದ್ದ ಹಿಂದಿನ ಟಿಪ್ಪಣಿಯನ್ನೇ ಇದರಲ್ಲೂ ಪ್ರಸ್ತಾಪಿಸಲಾಗಿದ್ದು, ₹1,100 ಕೋಟಿ ವೆಚ್ಚ ಮಾಡಿರುವ ಅವೈಜ್ಞಾನಿಕ ಕ್ರಮಗಳಿಂದ ವಾಹನ ಸವಾರರು ಹಾಗೂ ನಾಗರಿಕರ ಆರೋಗ್ಯ, ಪರಿಸರಕ್ಕೆ ಹಾನಿ ಉಂಟು ಮಾಡುವ ಯೋಜನೆಗಳಾಗಿವೆ ಎಂದಿದ್ದಾರೆ. ಪರಿಶುದ್ಧ ವೆಂಚರ್ಸ್ಗೆ ನಿಯಮಗಳನ್ನು ಮೀರಿ ₹13.5 ಕೋಟಿ ಮುಂಗಡ ನೀಡಿರುವುದರಿಂದ ಹಣದ ದುರುಪಯೋಗವಾಗಿದೆ. ಇದೆಲ್ಲವನ್ನೂ ಕೂಲಂಕಷವಾಗಿ ತನಿಖೆ ನಡೆಸಲು ಸೂಚಿಸಲಾಗಿದೆ.</p>.<p>ಬಜೆಟ್ ತಯಾರಿಯಿಂದ ಎಸ್ಐಟಿ ರಚನೆ ವಿಳಂಬವಾಗಿದ್ದು, ಶೀಘ್ರವೇ ತನಿಖಾ ತಂಡಕ್ಕೆ ಸದಸ್ಯರನ್ನು ನೇಮಿಸಿ ಸರ್ಕಾರಿ ಆದೇಶ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್ಡಬ್ಲ್ಯುಎಂಎಲ್) ಸಂಪೂರ್ಣ ಕಾರ್ಯವೈಖರಿ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.</p>.<p>ಮುಖ್ಯಮಂತ್ರಿ ಅವರು ನಗರಾಭಿವೃದ್ಧಿ ಇಲಾಖೆಗೆ ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಜೂನ್ 20ರಂದು ಕಳುಹಿಸಿದ್ದ ಟಿಪ್ಪಣಿಯನ್ನು ಮಾರ್ಪಡಿಸಿ, ಮುಖ್ಯ ಕಾರ್ಯದರ್ಶಿಯವರಿಗೆ ಜೂನ್ 26ರಂದು ಎಸ್ಐಟಿ ರಚಿಸಲು ಟಿಪ್ಪಣಿ ಕಳುಹಿಸಿದ್ದಾರೆ. ಬಿಎಸ್ಡಬ್ಲ್ಯುಎಂಎಲ್ ಟೆಂಡರ್ ಹಾಗೂ ಕಾರ್ಯಾದೇಶ ಪ್ರಕ್ರಿಯೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ಪಾತ್ರವೂ ಇರುವುದರಿಂದ, ಆ ಇಲಾಖೆಯ ಅಧಿಕಾರಿಗಳಿಂದ ತನಿಖೆ ನಡೆಸುವುದು ಬೇಡ ಎಂಬ ಉದ್ದೇಶದಿಂದ ಎಸ್ಐಟಿ ರಚಿಸಲು ಆದೇಶಿಸಿದ್ದಾರೆ.</p>.<p>ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ, ಎಸ್ಐಟಿ ರಚಿಸುವ ಬಗ್ಗೆ ಅಗತ್ಯ ಪ್ರಸ್ತಾವದೊಂದಿಗೆ ಕಡತ ಮಂಡಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಆದರೆ, ಮುಖ್ಯ ಕಾರ್ಯದರ್ಶಿಯವರು ಮತ್ತೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೇ ಟಿಪ್ಪಣಿಯನ್ನು ಕಳುಹಿಸಿರುವುದು ಗೊಂದಲಕ್ಕೀಡು ಮಾಡಿದೆ.</p>.<p>ಬಿಎಸ್ಡಬ್ಲ್ಯುಎಂಎಲ್ನಿಂದ ಸರ್ಕಾರದ ಹಣ ದುರುಪಯೋಗವಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ಆರ್. ರಮೇಶ್ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದರು. ‘ಪ್ರಜಾವಾಣಿ’ಯಲ್ಲಿ ‘ಗುತ್ತಿಗೆ ದೋಷಯುಕ್ತ: ₹13 ಕೋಟಿ ಬಿಡುಗಡೆ’ ಶೀರ್ಷಿಕೆಯಡಿ ಜೂನ್ 20ರಂದು ಹಾಗೂ ‘ಕಸ ಸಾಗಣೆಗೆ ದುಪ್ಪಟ್ಟಿಗೂ ಹೆಚ್ಚು ವೆಚ್ಚ’ ವರದಿ 2022ರ ಡಿ.20ರಂದು ಪ್ರಕಟವಾಗಿತ್ತು.</p>.<p>ಬಿಎಸ್ಡಬ್ಲ್ಯುಎಂಎಲ್ ಸ್ಥಾಪನೆಯಾದಂದಿನಿಂದ ನೀಡಿರುವ ಕಾರ್ಯಾದೇಶಗಳು, ಚಾಲ್ತಿಯಲ್ಲಿರುವ ಟೆಂಡರ್ ಪ್ರಕ್ರಿಯೆಗಳನ್ನು ಕೂಡಲೇ ರದ್ದುಗೊಳಿಸಬೇಕು. ಅನುಷ್ಠಾನಗೊಳಿಸಿದ ಕಾಮಗಾರಿಗಳು, ಹಣ ದುರುಪಯೋಗ, ಸಂಸ್ಥೆಯ ಸಂಪೂರ್ಣ ಕಾರ್ಯವೈಖರಿ ಬಗ್ಗೆ ಸಮಗ್ರ ತನಿಖೆ ನಡೆಸಿ ವಿವರವಾದ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದ್ದರು. ಇದೀಗ, ಆ ಎಲ್ಲ ಪ್ರಕ್ರಿಯೆ ರದ್ದುಗೊಳಿಸುವ ಜೊತೆಗೆ ತನಿಖೆಗೆ ಎಸ್ಐಟಿ ರಚಿಸಲು ತೀರ್ಮಾನಿಸಲಾಗಿದೆ.</p>.<p>ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿದ್ದ ಹಿಂದಿನ ಟಿಪ್ಪಣಿಯನ್ನೇ ಇದರಲ್ಲೂ ಪ್ರಸ್ತಾಪಿಸಲಾಗಿದ್ದು, ₹1,100 ಕೋಟಿ ವೆಚ್ಚ ಮಾಡಿರುವ ಅವೈಜ್ಞಾನಿಕ ಕ್ರಮಗಳಿಂದ ವಾಹನ ಸವಾರರು ಹಾಗೂ ನಾಗರಿಕರ ಆರೋಗ್ಯ, ಪರಿಸರಕ್ಕೆ ಹಾನಿ ಉಂಟು ಮಾಡುವ ಯೋಜನೆಗಳಾಗಿವೆ ಎಂದಿದ್ದಾರೆ. ಪರಿಶುದ್ಧ ವೆಂಚರ್ಸ್ಗೆ ನಿಯಮಗಳನ್ನು ಮೀರಿ ₹13.5 ಕೋಟಿ ಮುಂಗಡ ನೀಡಿರುವುದರಿಂದ ಹಣದ ದುರುಪಯೋಗವಾಗಿದೆ. ಇದೆಲ್ಲವನ್ನೂ ಕೂಲಂಕಷವಾಗಿ ತನಿಖೆ ನಡೆಸಲು ಸೂಚಿಸಲಾಗಿದೆ.</p>.<p>ಬಜೆಟ್ ತಯಾರಿಯಿಂದ ಎಸ್ಐಟಿ ರಚನೆ ವಿಳಂಬವಾಗಿದ್ದು, ಶೀಘ್ರವೇ ತನಿಖಾ ತಂಡಕ್ಕೆ ಸದಸ್ಯರನ್ನು ನೇಮಿಸಿ ಸರ್ಕಾರಿ ಆದೇಶ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>