<p><strong>ನೆಲಮಂಗಲ</strong>:‘ರಾಮನಗರ ಜಿಲ್ಲೆಯಲ್ಲಿರುವ ಸೋಲೂರನ್ನು ನೆಲಮಂಗಲ ತಾಲ್ಲೂಕಿಗೆ ಸೇರಿಸುವುದು, ಪಟ್ಟಣಕ್ಕೆ ಮೆಟ್ರೊ ವಿಸ್ತರಿಸುವುದು, ವೃಷಭಾವತಿ ಹಾಗೂ ಎತ್ತಿನಹೊಳೆ ಮೂಲಕ ಶಾಶ್ವತ ನೀರಾವರಿ ಕಲ್ಪಿಸುವುದು– ಈ ಮೂರು ಕೆಲಸಗಳನ್ನು ಮಾಡಿಕೊಡಲು ನಾನು ಬದ್ಧನಿದ್ದೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.</p>.<p>ಇಲ್ಲಿನ ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್ನ ದಶಮಾನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿರುವ ಸೋಲೂರನ್ನು ನೆಲಮಂಗಲ ತಾಲ್ಲೂಕಿಗೆ ಸೇರಿಸುವ ವಿಚಾರದಲ್ಲಿ ಸಂಸದ ಡಾ.ಕೆ.ಸುಧಾಕರ್ ರಾಜಕೀಯ ಮಾಡುತ್ತಿದ್ದಾರೆ. ಆ ಪ್ರಯತ್ನದ ಫಲ ಶಾಸಕ ಎನ್.ಶ್ರೀನಿವಾಸ್ ಅವರಿಗೆ ಸಲ್ಲಬೇಕು‘ ಎಂದು ಹೇಳಿದರು.</p>.<p>’ವಿದ್ಯಾರ್ಥಿಗಳು ಉದ್ಯೋಗಿಗಳಾಗುವ ಬದಲು, ಉದ್ಯೋಗದಾತರಾಗಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ದೊಡ್ಡದಾಗಿ ಕನಸು ಕಾಣಬೇಕು. ಆ ಕನಸು ನನಸಾಗಿಸಲು ಹಂಬಲಿಸಬೇಕು. ಅದಕ್ಕಾಗಿ ಬದ್ಧತೆ, ಪರಿಶ್ರಮ ಹಾಕಬೇಕು’ ಎಂದು ಕಿವಿ ಮಾತು ಹೇಳಿದರು.</p>.<p>ಶಾಸಕ ಎನ್.ಶ್ರೀನಿವಾಸ್ ಮಾತನಾಡಿ, ‘ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್ ಭವನ ನಿರ್ಮಾಣಕ್ಕೆ ನಗರದ ವ್ಯಾಪ್ತಿಯಲ್ಲಿ 1 ಎಕರೆ 19 ಗುಂಟೆ ಜಮೀನು ಮಂಜೂರಾತಿ ಪ್ರಕ್ತಿಯೆ ಚಾಲನೆಯಲ್ಲಿದೆ. ಭವನದ ಶಂಕು ಸ್ಥಾಪನೆಗೆ ₹ 1 ಕೊಟಿ ವೈಯಕ್ತಿಕ ನೆರವು ನೀಡಲಾಗುವುದು. ₹400 ಕೋಟಿ ವೆಚ್ಚದಲ್ಲಿ ಕೆ.ಸಿ ವ್ಯಾಲಿ ಮೂಲಕ ತಾಲ್ಲೂಕಿನ 69 ಕೆರೆಗಳನ್ನು ತುಂಬಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ವಿಧಾನ ಪರಿಷತ್ ಸದಸ್ಯ ರವಿ ಮಾತನಾಡಿ, ದೊಡ್ಡ ಹಿಡುವಳಿದಾರರಾಗಿದ್ದ ಒಕ್ಕಲಿಗರು ವಿಭಕ್ತ ಕುಟುಂಬಗಳಾಗಿ ಸಣ್ಣ ಹಿಡುವಳಿದಾರರಾಗುತ್ತಿದ್ದಾರೆಂದು ವಿಷಾಧಿಸಿದ ಅವರು, ಯಾವುದೇ ಕಾರಣಕ್ಕೂ ಜಮೀನುಗಳನ್ನು ಮಾರದಂತೆ ಎಚ್ಚರಿಸಿದರು.</p>.<p>ಕಾರ್ಯಕ್ರಮದಲ್ಲಿ, ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ 200ಕ್ಕೂ ಹೆಚ್ಚು ಪ್ರತಿಭಾನ್ವಿತರನ್ನು ಪುರಸ್ಕರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ</strong>:‘ರಾಮನಗರ ಜಿಲ್ಲೆಯಲ್ಲಿರುವ ಸೋಲೂರನ್ನು ನೆಲಮಂಗಲ ತಾಲ್ಲೂಕಿಗೆ ಸೇರಿಸುವುದು, ಪಟ್ಟಣಕ್ಕೆ ಮೆಟ್ರೊ ವಿಸ್ತರಿಸುವುದು, ವೃಷಭಾವತಿ ಹಾಗೂ ಎತ್ತಿನಹೊಳೆ ಮೂಲಕ ಶಾಶ್ವತ ನೀರಾವರಿ ಕಲ್ಪಿಸುವುದು– ಈ ಮೂರು ಕೆಲಸಗಳನ್ನು ಮಾಡಿಕೊಡಲು ನಾನು ಬದ್ಧನಿದ್ದೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.</p>.<p>ಇಲ್ಲಿನ ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್ನ ದಶಮಾನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿರುವ ಸೋಲೂರನ್ನು ನೆಲಮಂಗಲ ತಾಲ್ಲೂಕಿಗೆ ಸೇರಿಸುವ ವಿಚಾರದಲ್ಲಿ ಸಂಸದ ಡಾ.ಕೆ.ಸುಧಾಕರ್ ರಾಜಕೀಯ ಮಾಡುತ್ತಿದ್ದಾರೆ. ಆ ಪ್ರಯತ್ನದ ಫಲ ಶಾಸಕ ಎನ್.ಶ್ರೀನಿವಾಸ್ ಅವರಿಗೆ ಸಲ್ಲಬೇಕು‘ ಎಂದು ಹೇಳಿದರು.</p>.<p>’ವಿದ್ಯಾರ್ಥಿಗಳು ಉದ್ಯೋಗಿಗಳಾಗುವ ಬದಲು, ಉದ್ಯೋಗದಾತರಾಗಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ದೊಡ್ಡದಾಗಿ ಕನಸು ಕಾಣಬೇಕು. ಆ ಕನಸು ನನಸಾಗಿಸಲು ಹಂಬಲಿಸಬೇಕು. ಅದಕ್ಕಾಗಿ ಬದ್ಧತೆ, ಪರಿಶ್ರಮ ಹಾಕಬೇಕು’ ಎಂದು ಕಿವಿ ಮಾತು ಹೇಳಿದರು.</p>.<p>ಶಾಸಕ ಎನ್.ಶ್ರೀನಿವಾಸ್ ಮಾತನಾಡಿ, ‘ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್ ಭವನ ನಿರ್ಮಾಣಕ್ಕೆ ನಗರದ ವ್ಯಾಪ್ತಿಯಲ್ಲಿ 1 ಎಕರೆ 19 ಗುಂಟೆ ಜಮೀನು ಮಂಜೂರಾತಿ ಪ್ರಕ್ತಿಯೆ ಚಾಲನೆಯಲ್ಲಿದೆ. ಭವನದ ಶಂಕು ಸ್ಥಾಪನೆಗೆ ₹ 1 ಕೊಟಿ ವೈಯಕ್ತಿಕ ನೆರವು ನೀಡಲಾಗುವುದು. ₹400 ಕೋಟಿ ವೆಚ್ಚದಲ್ಲಿ ಕೆ.ಸಿ ವ್ಯಾಲಿ ಮೂಲಕ ತಾಲ್ಲೂಕಿನ 69 ಕೆರೆಗಳನ್ನು ತುಂಬಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ವಿಧಾನ ಪರಿಷತ್ ಸದಸ್ಯ ರವಿ ಮಾತನಾಡಿ, ದೊಡ್ಡ ಹಿಡುವಳಿದಾರರಾಗಿದ್ದ ಒಕ್ಕಲಿಗರು ವಿಭಕ್ತ ಕುಟುಂಬಗಳಾಗಿ ಸಣ್ಣ ಹಿಡುವಳಿದಾರರಾಗುತ್ತಿದ್ದಾರೆಂದು ವಿಷಾಧಿಸಿದ ಅವರು, ಯಾವುದೇ ಕಾರಣಕ್ಕೂ ಜಮೀನುಗಳನ್ನು ಮಾರದಂತೆ ಎಚ್ಚರಿಸಿದರು.</p>.<p>ಕಾರ್ಯಕ್ರಮದಲ್ಲಿ, ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ 200ಕ್ಕೂ ಹೆಚ್ಚು ಪ್ರತಿಭಾನ್ವಿತರನ್ನು ಪುರಸ್ಕರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>